ಪೊಲೀಸ್ ಆಯುಕ್ತ ಹರ್ಷ ಸೇರಿ 13 ಅಧಿಕಾರಿ ವರ್ಗಾವಣೆ : ಮಂಗಳೂರಿಗೆ ವಿಕಾಸ್ ಕುಮಾರ್ ನೂತನ ಕರ್ಮಿಷನರ್

0

ಬೆಂಗಳೂರು : ಮಂಗಳೂರು ಪೊಲೀಸ್ ಆಯುಕ್ತ ಹರ್ಷ ಸೇರಿದಂತೆ ರಾಜ್ಯದಲ್ಲಿ ಒಟ್ಟು 13 ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಮಂಗಳೂರು ಪೊಲೀಸ್ ಆಯುಕ್ತರಾಗಿದ್ದ ಪಿ.ಎಸ್.ಹರ್ಷ ಅವರನ್ನು ವಾರ್ತಾ ಇಲಾಖೆಯ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದ್ದು, ವಿಕಾಸ್ ಕುಮಾರ್ ವಿಕಾಸ್ ಅವರನ್ನು ಮಂಗಳೂರಿನ ನಗರ ಪೊಲೀಸ್ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ. ವಾರ್ತಾ ಇಲಾಖೆಯಲ್ಲಿ ಆಯುಕ್ತರಾಗಿದ್ದ ಸಿದ್ದರಾಮಪ್ಪ ಅವರನ್ನು ಸಿಐಡಿಯ ಆರ್ಥಿಕ ಅಪರಾಧ ವಿಭಾಗದ ಡಿಐಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ.

ಪೊಲೀಸ್ ಇಲಾಖೆ ಆಡಳಿತ ವಿಭಾಗದ ಐಜಿಪಿ ಆಗಿದ್ದ ಸೀಮಂತ್‌ಕುಮಾರ್‌ ಸಿಂಗ್ ಅವರನ್ನು ಕೇಂದ್ರ ವಿಭಾಗದ ಐಜಿಪಿಯಾಗಿ ವರ್ಗಾಯಿಸಲಾಗಿದೆ. ಅವರ ಜಾಗಕ್ಕೆ ಕೆ.ವಿ.ಶರತ್‌ಚಂದ್ರ ಅವರನ್ನು ವರ್ಗಾವಣೆ ಮಾಡಲಾಗಿದೆ.

ಚಿಕ್ಕಮಗಳೂರು ಎಸ್ಪಿ ಹರೀಶ್ ಪಾಂಡ್ಯ ಅವರನ್ನು ಗುಪ್ತದಳದ ಎಸ್ಪಿಯಾಗಿ ವರ್ಗಾಯಿಸಲಾಗಿದ್ದು, ಅವರ ಜಾಗಕ್ಕೆ ಎಚ್‌. ಅಕ್ಷಯ್ ಮಚ್ಚಿಂದ್ರ ಅವರನ್ನು ನೇಮಕ ಮಾಡಲಾಗಿದೆ.

ಕೊಡಗು ಎಸ್‌ಪಿ ಸುಮನ್ ಪೆನ್ನೆಕರ್ ಅವರನ್ನು ಬೆಂಗಳೂರು ನಗರ ಸಶಸ್ತ್ರ ಮೀಸಲು ಪಡೆಯ ಡಿಜಿಪಿ ಆಗಿ ವರ್ಗಾಯಿಸಲಾಗಿದ್ದು, ಅವರ ಜಾಗಕ್ಕೆ ಕ್ಷಮಾ ಮಿಶ್ರಾ ಅವರನ್ನು ನೇಮಿಸಲಾಗಿದೆ.

ಇನ್ನು ಚಾಮರಾಜನಗರ ಎಸ್ಪಿ ಎಚ್‌.ಡಿ.ಆನಂದ್‌ಕುಮಾರ್ ಅವರನ್ನು ಆಂತರಿಕ ಭದ್ರತಾ ದಳದ ಎಸ್ಪಿಯಾಗಿ ವರ್ಗಾಯಿಸಲಾಗಿದ್ದು, ಅವರ ಜಾಗಕ್ಕೆ ದಿವ್ಯಾ ಸಾರಾ ಥಾಮಸ್ ಅವರನ್ನು ವರ್ಗಾಯಿಸಲಾಗಿದೆ.

Leave A Reply

Your email address will not be published.