ಐಎಂಎ ಬಹುಕೋಟಿ ವಂಚನೆ ಪ್ರಕರಣ : ಪ್ರಮುಖ ಆರೋಪಿ ಮನ್ಸೂರ್ ಖಾನ್ ಗೆ ಜಾಮೀನು

ಬೆಂಗಳೂರು : ಬಹುಕೋಟಿ ಐಎಂಎ ವಂಚನೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಮನ್ಸೂರ್ ಖಾನ್ ಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಐಎಂಎ ಸಂಸ್ಥೆಯ ಮುಖ್ಯಸ್ಥನಾಗಿದ್ದ ಮನ್ಸೂರ್ ಖಾನ್ ಸಾವಿರಾರು ಕೋಟಿ ರೂಪಾಯಿ ವಂಚನೆ ನಡೆಸಿದ್ದ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕಷ್ಟು ದೂರುಗಳು ದಾಖಲಾಗಿತ್ತು. ಇದೀಗ ಆರೋಪಿ ಮನ್ಸೂರ್ ಖಾನ್ ಗೆ ಅನಾರೋಗ್ಯದ ಹಿನ್ನೆಲೆಯಲ್ಲಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಸಿಬಿಐ ಪರ ಎಸ್ ಪಿಪಿ ಪ್ರಸನ್ನ ಎಪ್ರೀಲ್ ವರೆಗೂ ಜಾಮೀನು ನೀಡದಂತೆ ಪ್ರತಿವಾದ ಮಂಡಿಸಿದ್ದರು. ಇದೀಗ 4ನೇ ಪ್ರಕರಣದಲ್ಲಿಯೂ ಮನ್ಸೂರ್ ಗೆ ನ್ಯಾಯಾಲಯ ಫೆಬ್ರವರಿ 12ರಿಂದ ಜಾರಿಗೆ ಬರುವಂತೆ ಜಾಮೀನು ಮಂಜೂರು ಮಾಡಿದೆ.

Comments are closed.