ಬೆಂಗಳೂರು : ನಾಡಹಬ್ಬ ಮೈಸೂರು ದಸರಾ ಮಹೋತ್ಸವವನ್ನು ಈ ಬಾರಿ ಸರಳವಾಗಿ ಆಚರಣೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಅಲ್ಲದೇ ಜನಾಕರ್ಷಣೆಯ ಜಂಬೂ ಸವಾರಿ ನಡೆಯುವುದಿಲ್ಲ ಎಂದು ಸಚಿವ ಸಿ.ಟಿ. ರವಿ ತಿಳಿಸಿದ್ದಾರೆ.

ಮೈಸೂರು ದಸರಾ ಮಹೋತ್ಸವ ಆಚರಣೆಯ ಕುರಿತು ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ದಸರಾ ಪೂರ್ವಭಾವಿ ಸಭೆಯ ಬಳಿಕ ಮಾತನಾಡಿದ ಸಚಿವ ಸಿ.ಟಿ. ರವಿ, ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಈ ಬಾರಿ ಸರಳವಾಗಿ ದಸರಾ ಆಚರಣೆ ಮಾಡಲು ನಿರ್ಧರಿಸಲಾಗಿದೆ. ದಸರಾದಲ್ಲಿ ಜಂಬೂ ಸವಾರಿ ಇರಲ್ಲ, ಕೇವಲ ಅರಮನೆ ಒಳಗಡೆ ಮಾತ್ರ ಜಂಬೂ ಸವಾರಿ ಇರಲಿದೆ ಎಂದರು.
ಇನ್ನು ಈ ಬಾರಿ ಮಕ್ಕಳ ದಸರಾ, ಮಹಿಳಾ ದಸರಾ , ಯುವದಸರಾ, ಕುಸ್ತಿ ಪಂದ್ಯಾವಳಿ, ಆಹಾರ ಮೇಳ , ಪಂಜಿನ ಕವಾಯತು ಕೂಡು ಇರುವುದಿಲ್ಲ ಎಂದು ತಿಳಿಸಿದರು.