ಭಾನುವಾರ, ಏಪ್ರಿಲ್ 27, 2025
HomeBreakingಪರೀಕ್ಷೆಯಿಲ್ಲದೇ ವಿದ್ಯಾರ್ಥಿಗಳು ಪಾಸ್ : ಸಿಬಿಎಸ್ಇ ವಿದ್ಯಾರ್ಥಿಗಳಿಗೂ ರಿಲೀಫ್

ಪರೀಕ್ಷೆಯಿಲ್ಲದೇ ವಿದ್ಯಾರ್ಥಿಗಳು ಪಾಸ್ : ಸಿಬಿಎಸ್ಇ ವಿದ್ಯಾರ್ಥಿಗಳಿಗೂ ರಿಲೀಫ್

- Advertisement -

ಬೆಂಗಳೂರು : ರಾಜ್ಯದ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ 1ನೇ ತರಗತಿಯಿಂದ 7ನೇ ತರಗತಿ ಹಾಗೂ ಪ್ರೌಢಶಾಲೆಯ 8 ಮತ್ತು 9ನೇ ತರಗತಿಯ ವಿದ್ಯಾರ್ಥಿಗಳನ್ನು ಪರೀಕ್ಷೆಯಿಲ್ಲದೇ ಪಾಸ್ ಮಾಡಲು ಸರಕಾರ ನಿರ್ಧರಿಸಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ಕೊರೊನಾ ಭೀತಿಯ ಹಿನ್ನೆಲೆಯಲ್ಲಿ ಎಪ್ರಿಲ್ 14ರವರೆಗೆ ದೇಶದಾದ್ಯಂತ ಲಾಕ್ ಡೌನ್ ಜಾರಿಯಲ್ಲಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಶಾಲೆಗಳಿಗೆ ಬೇಸಿಗೆ ರಜೆ ಘೋಷಿಸಲಾಗಿತ್ತು. ಆದ್ರೆ ವಿದ್ಯಾರ್ಥಿಗಳ ಪರೀಕ್ಷೆಯ ಬಗ್ಗೆ ಇಲಾಖೆ ಯಾವುದೇ ಸ್ಪಷ್ಟನೆಯನ್ನು ಕೊಟ್ಟಿರಲಿಲ್ಲ. ಇದರಿಂದಾಗಿ ವಿದ್ಯಾರ್ಥಿಗಳು, ಪೋಷಕರು ಹಾಗೂ ವಿದ್ಯಾರ್ಥಿಗಳು ಗೊಂದಲಕ್ಕೆ ಒಳಗಾಗಿದ್ದರು.

ಸಿಬಿಎಸ್ ಇ ಪಠ್ಯಕ್ರಮದಲ್ಲಿ ವಿದ್ಯಾಭ್ಯಾಸವನ್ನು ಪಡೆಯುತ್ತಿರೋ ವಿದ್ಯಾರ್ಥಿಗಳಿಗೂ ಕೂಡ ಪರೀಕ್ಷೆಯಿಲ್ಲದೇ ಪಾಸ್ ಮಾಡಲು ನಿರ್ಧರಿಸಲಾಗಿದೆ. ಆದರೆ ಎಸ್ಎಸ್ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿವೆ. ಎಪ್ರಿಲ್ 14ರ ನಂತರದಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆಯ ದಿನಾಂಕವನ್ನು ಪ್ರಕಟಿಸಲಾಗುವುದು ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular