ಸ್ಯಾನಿಟೈಸರ್ ಕುಡಿದು ವಿಧಾನಸಭೆಯಲ್ಲೇ ಆತ್ಮಹತ್ಯೆಗೆ ಯತ್ನಿಸಿದ ಬಿಜೆಪಿ ಶಾಸಕ…!!

ಭುವನೇಶ್ವರ್: ಕರ್ನಾಟಕ ವಿಧಾನಸಭೆಯಲ್ಲಿ ಸಮಸ್ಯೆಗಳ ಬಗ್ಗೆ ಗಮನ ಸೆಳೆಯಲು ಶರ್ಟ್ ಬಿಚ್ಚಿ ಕಾಂಗ್ರೆಸ್ ಶಾಸಕರು ಸುದ್ದಿಯಾದರೇ ಓಡಿಸ್ಸಾ ವಿಧಾನಸಭೆಯಲ್ಲಿ ಬಿಜೆಪಿ ಶಾಸಕ ಸಮಸ್ಯೆ ಬಗ್ಗೆ ಗಮನಸೆಳೆಯಲು ವಿಧಾನಸಭೆಯಲ್ಲೇ ಸ್ಯಾನಿಟೈಸರ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಬಿಜೆಪಿ ಶಾಸಕ ಸುಭಾಶ್ ಪನಿಗ್ರಾಹಿ ಆತ್ಮಹತ್ಯೆಗೆ ಯತ್ನಿಸಿದ ಶಾಸಕ. ರಾಜ್ಯದಲ್ಲಿ ಭತ್ತಸಂಗ್ರಹಣೆಗೆ ಸಂಬಂಧಿಸಿದ ಸಮಸ್ಯೆ ಇದೆ. ಇದರ ಬಗ್ಗೆ ಗಮನ ಸೆಳೆಯುವ ಸಲುವಾಗಿ ಆತ್ಮಹತ್ಯೆಗೆ ಯತ್ನಿಸಿದೆ ಎಂದು ಸ್ವತಃ ಬಿಜೆಪಿ ಶಾಸಕರೇ ಹೇಳಿಕೊಂಡಿದ್ದಾರೆ.

ರಾಜ್ಯದ ಡೇಬ್ ಗಬ್ ಪ್ರದೇಶದಲ್ಲಿ ಭತ್ತ ಸಂಗ್ರಹಣೆ ಸಮರ್ಪಕವಾಗಿ ಬೆಳೆಯುತ್ತಿಲ್ಲ. ಹೀಗಾಗಿ ರೈತರು ಸಮಸ್ಯೆಗೊಳಗಾಗಿದ್ದಾರೆ. 2 ಲಕ್ಷ ಕ್ವಿಂಟಾಲ್ ನಷ್ಟು ಭತ್ತ ಸಂಗ್ರಹಣೆಯಾಗದೇ ಉಳಿದುಹೋಗಿದೆ. ಈ ವಿಚಾರದ ಬಗ್ಗೆ ಸರ್ಕಾರದ ಗಮನ ಸೆಳೆಯಲು ಆತ್ಮಹತ್ಯೆಗೆ ಯತ್ನಿಸಿದೆ ಎಂದು ಪನಿಗ್ರಾಹಿ ಹೇಳಿದ್ದು, ಮಾಧ್ಯಮಗಳು ಸುದ್ದಿ ಮಾಡಿವೆ.

ಒಡಿಸ್ಸಾ ವಿಧಾನಸಭೆಯಲ್ಲಿ ಬಜೆಟ್ ಅಧಿವೇಶನ ಪ್ರಾರಂಭವಾಗಿದ್ದು, ಏಪ್ರಿಲ್ 9 ರವರೆಗೆ ಅಧಿವೇಶನ ನಡೆಯಲಿದೆ. ಫೆ.22 ರಂದು ಬಜೆಟ್ ಮಂಡನೆಯಾಗಿತ್ತು. ಬಜೆಟ್ ಮೇಲಿನ ಚರ್ಚೆ ವೇಳೆಶಾಸಕರ ವರ್ತನೆ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದೆ.

Comments are closed.