ಕುಂದಾಪುರ : ಕಾಡಿನಲ್ಲಿ ವಿಷ‌ ಸೇವಿಸಿ ವ್ಯಕ್ತಿ ಆತ್ಮಹತ್ಯೆ

ಕುಂದಾಪುರ : ವಿಷ‌ಸೇವಿಸಿ ವ್ಯಕ್ತಿಯೋರ್ವರು ಆತ್ಮಹತ್ಯೆ‌‌ ಮಾಡಿಕೊಂಡಿರುವ ಘಟನೆ ಉಡುಪಿ ಜಿಲ್ಲೆಯ‌ ಕುಂದಾಪುರ ತಾಲೂಕಿನ ಅಂಪಾರು ಸಮೀಪದ ಹಡಾಳಿಯಲ್ಲಿ ನಡೆದಿದೆ.

ಹಡಾಳಿ ನಿವಾಸಿ ಪ್ರಭಾಕರ ಶೆಟ್ಟಿ ಎಂಬವರೇ ಆತ್ಮಹತ್ಯೆ ಮಾಡಿಕೊಂಡವರು. ವಿಪರೀತ ‌ಕುಡಿತದ ಚಟ ಹೊಂದಿದ್ದು, ಇತ್ತೀಚಿನ‌ ದಿನಗಳಲ್ಲಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗುತ್ತಿದೆ. ಕಾಡಿನಲ್ಲಿ ವಿಷ‌ಸೇವಿಸಿ ಆತ್ಮಹತ್ಯೆ ‌ಮಾಡಿಕೊಂಡಿದ್ದಾರೆ.

ಈ ಕುರಿತು ಪ್ರಕರಣ‌ ದಾಖಲು ಮಾಡಿಕೊಂಡಿರುವ ಶಂಕರನಾರಾಯಣ ಠಾಣೆಯ ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ. ಆತ್ಮಹತ್ಯೆ ನಿಖರ ಕಾರಣ‌ ತಿಳಿದು ಬಂದಿಲ್ಲ‌.

Comments are closed.