ಕೊರೊನಾ ಹೋರಾಟಕ್ಕೆ ಮೋದಿಗೆ ಸಾಥ್ : 3 ದಿನಕ್ಕೆ ಪಿಎಂ ಕೇರ್ಸ್ ನಿಧಿಗೆ ಬಂದ ಹಣವೆಷ್ಟು ಗೊತ್ತಾ?

0

ನವದೆಹಲಿ : ಕೊರೊನಾ ವೈರಸ್ ವಿರುದ್ಧದ ಹೋರಾಟಕ್ಕೆ ದೇಶವೇ ಕೈ ಜೋಡಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಕರೆಯ ಮೇರೆಗೆ ಪ್ರಧಾನ ಮಂತ್ರಿ ನಾಗರಿಕ ಸಹಾಯ ಮತ್ತು ತುರ್ತು ಪರಿಸ್ಥಿತಿಗಳ ನಿಧಿ (ಪಿಎಂ ಕೇರ್ಸ್ ಫಂಡ್)ಗೆ ಜಮೆಯಾದ ಮೊತ್ತ ಕೇಳಿದ್ರೆ ಬೆಚ್ಚಿ ಬೀಳ್ತಿರಿ. ಅಷ್ಟಕ್ಕೂ ಕೇವಲ ಮೂರೇ ಮೂರು ದಿನಗಳಲ್ಲಿ ಪಿಎಂ ಕೇರ್ಸ್ ಫಂಡ್ ಗೆ ಬರೋಬ್ಬರಿ 7,314 ಕೋಟಿ ರೂ. ದೇಣಿಗೆ ಜಮೆಯಾಗಿದೆ.

ದೇಶದಲ್ಲಿ ಕೊರೊನಾ ಮಹಾಮಾರಿಯ ಅಬ್ಬರ ಜೋರಾಗುತ್ತಲೇ ಕೇಂದ್ರ ಸರಕಾರ ಕೊರೊನಾ ನಿಯಂತ್ರಣಕ್ಕೆ ಪ್ರಧಾನ ಮಂತ್ರಿ ನಾಗರಿಕ ಸಹಾಯ ಮತ್ತು ತುರ್ತು ಪರಿಸ್ಥಿತಿಗಳ ಪರಿಹಾರ ನಿಧಿಯನ್ನು ರಚಿಸಿತ್ತು. ಪ್ರಧಾನಿ ನರೇಂದ್ರ ಮೋದಿ ಅವರು, ಪಿಎಂ ಕೇರ್ಸ್ ಗೆ ಉದಾರವಾಗಿ ದೇಣಿಗೆ ನೀಡಬೇಕೆಂದು ಜನತೆಗೆ ಮನವಿ ಮಾಡಿಕೊಂಡಿದ್ದರು. ನಮೋ ಕರೆಗೆ ಸ್ಪಂಧಿಸಿರೋ ದೇಶದ ಜನತೆ ಅಪಾರ ಪ್ರಮಾಣದಲ್ಲಿ ದೇಣಿಗೆ ನೀಡುತ್ತಿದ್ದಾರೆ.

ಈಗಾಗಲೇ ಬಾಲಿವುಡ್ ಸೆಲೆಬ್ರಿಟಿಗಳು, ಕ್ರೀಡಾಪಟುಗಳು, ಕ್ರಿಕೆಟ್ ಆಟಗಾರರು, ಉದ್ಯಮಿಗಳು ಸೇರಿದಂತೆ ಹಲವಾರು ಗಣ್ಯರು ಪಿಎಂ-ಕೇರ್ಸ್ ನಿಧಿಗೆ ಉದಾರ ದೇಣಿಗೆ ನೀಡಿದ್ದಾರೆ. ಕಳೆದ ಮೂರು ದಿನಗಳಲ್ಲಿ ಪಿಎಂ ಕೇರ್ಸ್ ಫಂಡ್ ಗೆ ಬರೊಬ್ಬರಿ 7,314 ಕೋಟಿ ರೂ. ದೇಣಿಗೆ ಜಮೆಯಾಗಿದೆ. ಈ ಪೈಕಿ ಕಾರ್ಪೊರೇಟ್ ಸಂಸ್ಥೆಗಳಾದ ಟಾಟಾ ಗ್ರೂಪ್ 1,500 ಕೋಟಿ ರೂ., ರಿಲಯನ್ಸ್ ಇಂಡಸ್ಟ್ರೀಸ್ 500 ಕೋಟಿ ರೂ., ಒಎನ್‍ಜಿಸಿ 300 ಕೋಟಿ ರೂ.,

ಸರ್ಕಾರಿ ಸಂಸ್ಥೆಗಳಾದ ಭಾರತೀಯ ರೈಲ್ವೆ 151 ಕೋಟಿ ರೂ. ಮತ್ತು ಲಾರ್ಸೆನ್ ಮತ್ತು ಟೂಬ್ರೊ 150 ಕೋಟಿ ರೂ, ವಿಪ್ರೋ ಮತ್ತು ಅಜೀಮ್ ಪ್ರೇಮ್ ಜೀ ಅವರ 1125 ಕೋಟಿ ರೂಪಾಯಿ ಹಾಗೂ ಟಾಟಾ ಸನ್ಸ್, ರಿಲಯನ್ಸ್ ಇಂಡಸ್ಟ್ರೀಸ್ ಮತ್ತು ಅದಾನಿ ಗ್ರೂಪ್‍ನಂತಹ ಕಾರ್ಪೋರೇಟ್ ಸಂಸ್ಥೆಗಳು ತುರ್ತು ನಿಧಿಗೆ ಕೋಟ್ಯಾಂತರ ಹಣ ನೀಡಿವೆ.

Leave A Reply

Your email address will not be published.