Breaking

ಸಾಹಿತಿ ಪ್ರೋ.ಭಗವಾನ್ ಮುಖಕ್ಕೆ ನ್ಯಾಯಾಲಯದ ಆವರಣದಲ್ಲೇ ಮಸಿ ಬಳಿದ ವಕೀಲೆ

Published by
Kannada News Next Desk

ಬೆಂಗಳೂರು : ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ವಕೀಲೆಯೊಬ್ಬರು ಕೋರ್ಟ್ ಆವರಣದಲ್ಲಿಯೇ ಸಾಹಿತಿ ಪ್ರೊ. ಭಗವಾನ್ ಮುಖಕ್ಕೆ ಮಸಿ ಬಳಿದಿರುವ ಘಟನೆ ನಡೆದಿದೆ.

ವಕೀಲರಾಗಿರುವ ಮೀರಾ ರಾಘವೇಂದ್ರ ಎಂಬವರು ಹಿಂದೂ ಧರ್ಮದ ವಿರುದ್ದ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಜಾಮೀನು ಪಡೆಯುವ ಸಲುವಾಗಿ ಪ್ರೊ.ಭಗವಾನ್ ಇಂದು ನ್ಯಾಯಾಲಯಕ್ಕೆ ಹಾಜರಾಗಿದ್ದರು. ಈ ವೇಳೆಯಲ್ಲಿ ವಕೀಲರಾಗಿರುವ ಮೀರಾ ರಾಘವೇಂದ್ರ ಅವರು ಮಸಿ ಬಳಿದಿದಿದ್ದಾರೆ.

ಅಲ್ಲದೇ ಮಸಿ ಬಳಿದಿರುವ ವಿಡಿಯೋವನ್ನು ತಮ್ಮ ಟ್ವೀಟರ್ ಖಾತೆಯಲ್ಲಿ ಅಪ್ಲೋಡ್ ಮಾಡಿದ್ದಾರೆ. ಇಷ್ಟು ವಯಸ್ಸು ಆಗಿದೆ ರಾಮನ ಬಗ್ಗೆ ಧರ್ಮದ ಬಗ್ಗೆ ಮಾತಾಡ್ತೀರಲ್ಲ ನಿಮಗೆ ನಾಚಿಕೆ ಆಗೋದಿಲ್ವಾ ಅಂತಾ ತರಾಟೆಗೆ ತೆಗೆದುಕೊಂಡಿದ್ದಾರೆ.

This post was last modified on ಫೆಬ್ರವರಿ 4, 2021 3:36 ಅಪರಾಹ್ನ

Share