ಸೋಮವಾರ, ಏಪ್ರಿಲ್ 28, 2025
HomeBreakingಮಹಾರಾಷ್ಟ್ರದಿಂದ ಬಂದವರಿಗೆ 14 ದಿನ ಕ್ವಾರಂಟೈನ್ ಕಡ್ಡಾಯ : ಸೋಂಕು ಹೆಚ್ಚಳ ಬೆನ್ನಲ್ಲೇ ರಾಜ್ಯ ಸರಕಾರ...

ಮಹಾರಾಷ್ಟ್ರದಿಂದ ಬಂದವರಿಗೆ 14 ದಿನ ಕ್ವಾರಂಟೈನ್ ಕಡ್ಡಾಯ : ಸೋಂಕು ಹೆಚ್ಚಳ ಬೆನ್ನಲ್ಲೇ ರಾಜ್ಯ ಸರಕಾರ ಮಹತ್ವದ ತೀರ್ಮಾನ

- Advertisement -

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಳವಾದ ಬೆನ್ನಲ್ಲೇ ರಾಜ್ಯ ಸರಕಾರ ಮಹಾರಾಷ್ಟ್ರದಿಂದ ಬರುವವರ ಕ್ವಾರಂಟೈನ್ ಅವಧಿಯನ್ನು 7 ದಿನಗಳಿಂದ 14 ದಿನಗಳಿಗೆ ಹೆಚ್ಚಳ ಮಾಡಿದೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿಂದು ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ರಾಜ್ಯ ಸರಕಾರ ಕಳೆದ ಕೆಲ ದಿನಗಳ ಹಿಂದೆಯಷ್ಟೇ ಕ್ವಾರಂಟೈನ್ ಅವಧಿಯನ್ನು 14 ದಿನಗಳಿಂದ 7 ದಿನಕ್ಕೆ ಕಡಿತ ಮಾಡಿತ್ತು. ಆದರೆ ರಾಜ್ಯದಲ್ಲಿ ಕಳೆದೊಂದು ವಾರದಿಂದಲೂ ಕೊರೊನಾ ಪೀಡಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ಅದ್ರಲ್ಲೂ ಮಹಾರಾಷ್ಟ್ರದಿಂದ ಬಂದವರಿಂದಲೇ ಸೋಂಕು ವ್ಯಾಪಕವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಕ್ವಾರಂಟೈನ್ ಅವಧಿಯನ್ನು ಮತ್ತೆ ಹೆಚ್ಚಳ ಮಾಡಿದೆ.

ಮಹಾರಾಷ್ಟ್ರದಿಂದ ಬಂದವರಿಗೆ ಕಡ್ಡಾಯ 14 ದಿನಗಳ ಕ್ವಾರಂಟೈನ್ ಹಾಗೂ ಇತರ ರಾಜ್ಯಗಳಿಂದ ಬಂದವರಿಗೆ 7 ದಿನ ಕ್ವಾರಂಟೈನ್ ಹಾಗೂ 7 ದಿನ ಸಾಂಸ್ಥಿಕ ಕ್ವಾರಂಟೈನ್ ವಿಧಿಸಲು ನಿರ್ಧರಿಸಲಾಗಿದೆ. ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಕಂದಾಯ ಸಚಿವ ಆರ್.ಅಶೋಕ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular