ಸಂತ್ರಸ್ತೆ ನನ್ನ ಸಂಪರ್ಕದಲ್ಲಿಲ್ಲ : ದಿನೇಶ್ ಕಲ್ಲಹಳ್ಳಿ

ಬೆಂಗಳೂರು : ಸಂತ್ರಸ್ತ ಮಹಿಳೆ ನನ್ನ ಸಂಪರ್ಕದಲ್ಲಿಲ್ಲ. ಮಹಿಳೆಯ ಕುಟುಂಬಸ್ಥರು ಕೊಟ್ಟಿರುವ ಸಿಡಿಯನ್ನು ನಾನು ಮುಚ್ಚಿದ ಲಕೋಟೆಯಲ್ಲಿ ಪೊಲೀಸರಿಗೆ ದೂರು ನೀಡಿದ್ದೇನೆ. ಅದು ಹೇಗೆ ಲೀಕ್ ಆಗಿದೆಯೋ ಗೊತ್ತಿಲ್ಲ. ಕೆಲವೊಂದು ವಿಷಯಗಳನ್ನು ಮಾಧ್ಯಮದ ಮುಂದೆ ಹೇಳೋದಕ್ಕೆ ಸಾಧ್ಯವಿಲ್ಲ ಎಂದು ದೂರುದಾರ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ.

ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಬಹಿರಂಗ ಪಡಿಸಿದ ಬೆನ್ನಲ್ಲೇ ದೂರುದಾರ ದಿನೇಶ್ ಕಲ್ಲಹಳ್ಳಿ ಇಂದು ಕಬ್ಬನ್ ಪಾರ್ಕ ಪೊಲೀಸ್ ಠಾಣೆಗೆ ಭೇಟಿ ನೀಡಿ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ಈ ವೇಳೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ತನಿಖೆಗೆ ಬೇಕಾಗಿರುವ ಎಲ್ಲಾ ರೀತಿಯ ಮಾಹಿತಿಯನ್ನು ಕೊಟ್ಟಿದ್ದೇನೆ ಎಂದಿದ್ದಾರೆ.

ನಾನು ಕೊಟ್ಟಿರುವ ದೂರಿಗೆ ಈಗನೂ ಬದ್ದನಾಗಿದ್ದೇನೆ. ಆದರೆ ಮಹಿಳೆಯ ಕುಟುಂಬಸ್ಥರ ಕುರಿತು ಮಾಹಿತಿಯನ್ನು ಮಾಧ್ಯಮದವರ ಮುಂದೆ ನೀಡೋದಕ್ಕೆ ಸಾಧ್ಯವಿಲ್ಲ. ಕುಟುಂಬಸ್ಥರು ನನ್ನನ್ನು ಭೇಟಿ ಮಾಡಿ ಸಿಡಿಯನ್ನು ನೀಡಿರುವ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ್ದೇನೆ ಎಂದಿದ್ದಾರೆ.

Comments are closed.