ಮಂಗಳೂರಲ್ಲಿ ರೌಡಿಶೀಟರ್ ಬರ್ಬರ ಹತ್ಯೆ : ಗಾರ್ಡನ್ ಒಳಗೆ ಶವ ಎಸೆದ ದುಷ್ಕರ್ಮಿಗಳು

ಮಂಗಳೂರು : ರೌಡಿಶೀಟರ್ ಓರ್ವನನ್ನು ಮಾರಕಾಸ್ತ್ರಗಳಿಂದ ಬರ್ಬರವಾಗಿ ಹತ್ಯೆಗೈದು ಶವವನ್ನು ಗಾರ್ಡನ್ ಒಳಗೆ ಎಸೆದು ಪರಾರಿಯಾಗಿರುವ ಘಟನೆ ಮಂಗಳೂರು ನಗರದ ಬೊಕ್ಕಪಟ್ಟಣದ ಕರ್ನಲ್ ಗಾರ್ಡನ್ ನಲ್ಲಿ ನಡೆದಿದೆ.

ಬೊಕ್ಕಪಟ್ಟಣದ ನಿವಾಸಿ ಇಂದ್ರಜಿತ್ (45 ವರ್ಷ ) ಎಂಬಾತನೇ ಕೊಲೆಯಾದ ರೌಡಿಶೀಟರ್. ಬುಧವಾರ ರಾತ್ರಿ ಇಂದ್ರಜಿತ್ ಮೆಹಂದಿ ಕಾರ್ಯಕ್ರಮವೊಂದಕ್ಕೆ ತೆರಳಿದ್ದ ಈ ವೇಳೆಯಲ್ಲಿ ಯಾವುದೋ ಕಾರಣಕ್ಕೆ ಗಲಾಟೆ ನಡೆದಿದೆ. ಇಂದು ನಸುಕಿನ ವೇಳೆಯಲ್ಲಿ ಕೊಲೆ ನಡೆದಿರಬಹುದು ಎಂದು ಶಂಕಿಸಲಾಗುತ್ತಿದೆ.

ಶವವನ್ನು ಗಾರ್ಡನ್ ಒಳಗೆ ಎಸೆದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಸ್ಥಳೀಯರು ವಾಕಿಂಗ್ ಮಾಡೋದಕ್ಕೆ ಗಾರ್ಡನ್ ಗೆ ತೆರಳಿದ್ದ ವೇಳೆಯಲ್ಲಿ ಕೊಲೆಯಾಗಿರೋ ವಿಚಾರ ಬೆಳಕಿಗೆ ಬಂದಿದೆ. ಈತನ ಮೇಲೆ ಈ ಹಿಂದೆ ಕೂಡ ದುಷ್ಕರ್ಮಿಗಳು ತಲವಾರಿನಿಂದ ಹಲ್ಲೆ ನಡೆಸಿದ್ದರು ಎನ್ನಲಾಗುತ್ತಿದೆ.

ಪ್ರಕರಣ ದಾಖಲು ಮಾಡಿಕೊಂಡಿರುವ ಬರ್ಕೆ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿಯನ್ನು ನೀಡಿ ಪರಿಶೀಲನೆಯನ್ನು ನಡೆಸುತ್ತಿದ್ದಾರೆ.

Comments are closed.