ಬೈಕ್ ಮುಖಾಮುಖಿ ಢಿಕ್ಕಿ : ಕುಂದಾಪುರ ಯುವ ಉದ್ಯಮಿ ಸಾವು

0

ಹಾವೇರಿ : ಬೈಕ್ ಗಳ ನಡುವೆ ನಡೆದ ಮುಖಾಮುಖಿ ಢಿಕ್ಕಿಯಲ್ಲಿ ಉಡುಪಿ ಜಿಲ್ಲೆಯ ವಡ್ಡರ್ಸೆಯ ಯುವ ಉದ್ಯಮಿಯೋರ್ವರು ಸಾವನ್ನಪ್ಪಿದ ಘಟನೆ ಹಾವೇರಿಯಲ್ಲಿ ನಡೆದಿದೆ.

ಹಾವೇರಿಯ ನಿಸರ್ಗ ಹೋಟೆಲ್ ಮಾಲೀಕ ಕುಂದಾಪುರ ಮೂಲದ ಸಚಿನ್ ಶೆಟ್ಟಿ ( 28 ವರ್ಷ) ಎಂಬವರೇ ಸಾವನ್ನಪ್ಪಿದ ದುರ್ದೈವಿ. ಹಾನಗಲ್ ರಸ್ತೆಯಲ್ಲಿ ರುವ ನಿಸರ್ಗ ಹೋಟೆಲ್ ಬಳಿಯಲ್ಲಿ ಬೈಕಿನಲ್ಲಿ ಚಲಿಸುತ್ತಿದ್ದಾಗ ಸಚಿನ್ ಅವರು ಡಿವೈಡರ್ ಗ್ಯಾಪಿನಲ್ಲಿ ಹೋಟೆಲ್ ಕಡೆಗೆ ಬೈಕ್ ಚಲಿಸಿದ್ದಾರೆ.

ಈ ವೇಳೆಯಲ್ಲಿ ಎದುರಿನಿಂದ ವೇಗವಾಗಿ ಬರುತ್ತಿದ್ದ ಬೈಕ್ ಢಿಕ್ಕಿ ಹೊಡೆದಿದೆ. ಗಂಭೀರವಾಗಿ ಗಾಯಗೊಂಡಿದ್ದ ಸಚಿನ್ ನನ್ನು ಕೂಡಲೇ ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತಾದ್ರೂ, ಹೆಚ್ಚಿನ ಚಿಕಿತ್ಸೆಯ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಚಿನ್ ಸಾವನ್ನಪ್ಪಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಮೃತ ಸಚಿನ್ ಸಂಬಂಧಿಕರು ದೂರು ದಾಖಲಿಸಲು ಮುಂದಾದಾಗ ಪೊಲೀಸರು ಪ್ರಕರಣ ದಾಖಲಿಸಿಕೊಳ್ಳದೆ ದರ್ಪ ಮೆರೆದಿದ್ದಾರೆ ಎಂದು ಸಚಿನ್ ಸಂಬಂಧಿಕರು ಆರೋಪಿಸಿದ್ದಾರೆ.

Leave A Reply

Your email address will not be published.