ಸೋಮವಾರ, ಏಪ್ರಿಲ್ 28, 2025
HomeBreakingನಟ ಶರಣ್ ಗೆ ಅನಾರೋಗ್ಯ : ಆಸ್ಪತ್ರೆಗೆ ದಾಖಲು

ನಟ ಶರಣ್ ಗೆ ಅನಾರೋಗ್ಯ : ಆಸ್ಪತ್ರೆಗೆ ದಾಖಲು

- Advertisement -

ಬೆಂಗಳೂರು : ಸಿನಿಮಾ ಶೂಟಿಂಗ್ ವೇಳೆಯಲ್ಲಿ ನಡೆದ ಅವಘಡ ಹಿನ್ನೆಲೆಯಲ್ಲಿ ಸ್ಯಾಂಡಲ್ ವುಡ್ ನಟ ಶರಣ್ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಶರಣ್ ಅವರ ಕೈಗೆ ಪೆಟ್ಟಾಗಿದ್ದು, ಚಿತ್ರೀಕರಣದ ವೇಳೆಯಲ್ಲಿ ಗಾಯವಾಗಿರುವ ಸಾಧ್ಯತೆಯಿದೆ. ಆದರೆ ಚಿತ್ರ ತಂಡ ಹೊಟ್ಟೆ ನೋವಿನ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎನ್ನಲಾಗುತ್ತಿದೆ.

ನಟ ಶರಣ್ ಬೆಂಗಳೂರಿನ ಎಚ್ಎಂಟಿ ಗ್ರೌಂಡ್ಸ್ ನಲ್ಲಿ ಅವತಾರ ಪುರುಷ ಸಿನಿಮಾದ ಶೂಟಿಂಗ್ ನಲ್ಲಿ ತೊಡಗಿಕೊಂಡಿದ್ದಾರೆ. ಈ ವೇಳೆಯಲ್ಲಿ ಶರಣ್ ಅವರಿಗೆ ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ಹೊಟ್ಟೆ ನೋವಿನಿಂದ ಒದ್ದಾಡುತ್ತಿದ್ದ ಶರಣ್ ಅವರನ್ನು ನಿರ್ದೇಶಕ ಸಿಂಪಲ್ ಸುನಿ ಹಾಗೂ ಸ್ನೇಹಿತರು ಕೂಡಲೇ ಮಲ್ಲಿಗೆ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆಯನ್ನು ಕೊಡಿಸಲಾಗುತ್ತಿದೆ.

ಆದರೆ ಶರಣ್ ಅವರ ಕೈ ಬೆರಳಿಗೆ ಗಾಯವಾಗಿದೆ ಎನ್ನಲಾಗುತ್ತಿದ್ದು, ಚಿತ್ರೀಕರಣದ ವೇಳೆಯಲ್ಲಿ ದುರಂತ ನಡೆದಿರಬಹುದು ಎಂದು ಹೇಳಲಾಗುತ್ತಿದೆ. ಆಸ್ಪತ್ರೆಗೆ ಶರಣ್ ಅವರ ಸಹೋದರಿ ನಟಿ ಶ್ರುತಿ ಅವರು ಆಗಮಿಸಿದ್ದಾರೆ. ಕೆಲವೇ ಕ್ಷಣಗಳಲ್ಲಿ ಶರಣ್ ಅವರು ಆಸ್ಪತ್ರೆಯಿಂದ ಹೊರ ಬಂದು ಮಾಧ್ಯಮದವರೊಂದಿಗೆ ಮಾತನಾಡಲಿದ್ದಾರೆ ಎನ್ನಲಾಗುತ್ತಿದೆ. ಶರಣ್ ಅವರು ಗುಣಮುಖರಾದ ನಂತರವೇ ಘಟನೆಯ ಕುರಿತು ಸ್ಪಷ್ಟ ಮಾಹಿತಿ ಹೊರಬರಲು ಸಾಧ್ಯ.

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular