ರಾಬರ್ಟ್ ಎಂಟ್ರಿಗೂ ಮುನ್ನ ದಚ್ಚು ಟೆಂಪಲ್ ರನ್…! ತಿರುಪತಿ ತಿಮ್ಮಪ್ಪನ ಮೊರೆ ಹೋದ ದರ್ಶನ್…!!

ಶಿವರಾತ್ರಿಯಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನೀರಿಕ್ಷಿತ ಚಿತ್ರ ರಾಬರ್ಟ್ ತೆರೆಗೆ ಬರಲು ಸಜ್ಜಾಗಿದ್ದು, ಕನ್ನಡ ಹಾಗೂ ತೆಲುಗಿನಲ್ಲಿ ಏಕಕಾಲಕ್ಕೆ ರಿಲೀಸ್ ಆಗಲಿದೆ. ಸಿನಿಮಾ ರಿಲೀಸ್ ಗೂ ಮುನ್ನವೇ ದಚ್ಚು ಟೆಂಪಲ್ ರನ್ ಆರಂಭಿಸಿದ್ದು, ತಿರುಪತಿ ತಿಮ್ಮಪ್ಪನ ಪಾದಕ್ಕೆ ದರ್ಶನ್ ಶರಣು ಎಂದಿದ್ದಾರೆ.  

ದರ್ಶನ್ ಅಭಿನಯದ ರಾಬರ್ಟ್ ಮಾರ್ಚ್ 11 ರಂದು ರಾಜ್ಯದಾದ್ಯಂತ ಹಾಗೂ ಆಂಧ್ರಪ್ರದೇಶ-ತೆಲಂಗಾಣದಲ್ಲೂ ರಿಲೀಸ್ ಆಗಲಿದ್ದು, ಈಗಾಗಲೇ ತೆಲುಗು ಟೀಸರ್ ಕೂಡ ಸಖತ್ ಸದ್ದು ಮಾಡ್ತಿದೆ. ಈ ಮಧ್ಯೆ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ ಹಾಗೂ ನಟ ದರ್ಶನ್ ತಿರುಪತಿಗೆ ಭೇಟಿ ನೀಡಿ ವೆಂಕಟೇಶ್ವರ್ ನ ದರ್ಶನ ಪಡೆದಿದ್ದಾರೆ.

ಚಾಲೆಂಜಿಂಗ್ ಸ್ಟಾರ್ ದರ್ಶನ್ ತಿರುಪತಿಗೆ ಭೇಟಿ ನೀಡಿದ ವೇಳೆ ತೆಲುಗು ನಿರ್ಮಾಪಕ ಹಾಗೂ ನಿರ್ದೇಶಕರು ಸಾಥ್ ನೀಡಿದ್ದರು. ತೆಲುಗಿನ ಹಿರಿಯ ನಿರ್ದೇಶಕ ಚಂಚಲವಾಡ ಶ್ರೀನಿವಾಸ್ ರಾವ್ ವಿತರಣೆ ಮಾಡುತ್ತಿದ್ದಾರೆ.  ಶ್ರೀವೆಂಕಟೇಶ್ವರ ಮೂವಿಸ್ ಮೂಲಕ  ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯದಲ್ಲಿ ಚಿತ್ರ ರಿಲೀಸ್ ಮಾಡುತ್ತಿದ್ದಾರೆ.

ಮಾರ್ಚ್ 11 ರಂದು ತೆಲುಗಿನಲ್ಲಿ ರಾಬರ್ಟ್ ರಿಲೀಸ್ ಮಾಡಲು ನಿರ್ಧರಿಸಲಾಗಿತ್ತಾದರೂ  ಮೊದಲು ತೆಲುಗಿನಲ್ಲಿ ಚಿತ್ರ ಬಿಡುಗಡೆಗೆ ವಿರೋಧ ವ್ಯಕ್ತವಾಗಿತ್ತು.  ಬಳಿಕ ದರ್ಶನ್ ಹಾಗೂ ನಿರ್ಮಾಪಕ ಉಮಾಪತಿ  ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಗೆ ದೂರು ನೀಡಿದ್ದರು.

ಇದಾದ ಬಳಿಕ ವಿವಾದ ಬಗೆಹರಿದಿತ್ತು. ಹೀಗಾಗಿ  ಮಾರ್ಚ್ 11 ರಂದು ತೆಲುಗಿನಲ್ಲಿ 300 ರಿಂದ 400 ಥಿಯೇಟರ್ ಗಳಲ್ಲಿ ರಾಬರ್ಟ್ ರಿಲೀಸ್ ಆಗಲಿದೆ.

Comments are closed.