ಸ್ಪೋಟಕ ಮಾಹಿತಿ ಬಾಯ್ಬಿಟ್ಟ ಅಕುಲ್ ಬಾಲಾಜಿ, ಸಂತೋಷ್ : ಮತ್ತೆ ನಾಲ್ವರು ನಟರಿಗೆ ನೋಟಿಸ್ ಸಾಧ್ಯತೆ !

0

ಬೆಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೂಪಕ, ನಟ ಅಕುಲ್ ಬಾಲಾಜಿ, ನಟ ಸಂತೋಷ್ ಆರ್ಯನ್ ಹಾಗೂ ಕಾರ್ಪೋರೇಟರ್ ಆರ್.ವಿ.ಯುವರಾಜ್ ಅವರು ಸಿಸಿಬಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ಸುದೀರ್ಘ 7 ಗಂಟೆಗಳ ಕಾಲ ವಿಚಾರಣೆಯ ಬಳಿಕ ಮೂವರು ಹೊರಬಂದಿದ್ದಾರೆ. ವಿಚಾರಣೆಯ ವೇಳೆಯಲ್ಲಿ ಅಕುಲ್ ಬಾಲಾಜಿ ಹಾಗೂ ಸಂತೋಷ್ ಆರ್ಯನ್ ಸ್ಪೋಟಕ ಮಾಹಿತಿಯನ್ನು ಬಾಯ್ಬಿಟ್ಟಿದ್ದು, ಇನ್ನೂ ನಾಲ್ವರು ಸ್ಟಾರ್ ನಟರಿಗೆ ಸಿಸಿಬಿ ನೋಟಿಸ್ ನೀಡುವ ಸಾಧ್ಯತೆಯಿದೆ.

ಬೆಳಗ್ಗೆ 10 ಗಂಟೆಗೆ ಸಿಸಿಬಿ ಕಚೇರಿಗೆ ಹಾಜರಾದ ಯುವರಾಜ್, ಸಂತೋಷ್ ಹಾಗೂ ಅಕುಲ್ ಬಾಲಾಜಿ ಸಿಸಿಬಿ ಅಧಿಕಾರಿಗಳ ಮುಂದೆ ಪ್ರತ್ಯೇಕವಾಗಿ ವಿಚಾರಣೆಗೆ ಹಾಜರಾಗಿದ್ದಾರೆ. ಸತತ 7 ಗಂಟೆಗಳ ಕಾಲ ಸಿಸಿಬಿ ಅಧಿಕಾರಿಗಳು ಡ್ರಗ್ಸ್ ಮಾಫಿಯಾಕ್ಕೆ ಸಂಬಂಧಿಸಿದಂತೆ ಪ್ರಶ್ನೆಗಳನ್ನು ಕೇಳಿದ್ದಾರೆ. ಆರ್.ವಿ.ಯುವರಾಜ್ ಹೆಸರು ಡ್ರಗ್ಸ್ ಪೆಡ್ಲರ್ ಗಳ ಜೊತೆಗೆ ಕೇಳಿಬಂದಿದ್ರೆ, ಅಕುಲ್ ಬಾಲಾಜಿ ರೆಸಾರ್ಟ್ ಹಾಗೂ ಸಂತೋಷ್ ಆರ್ಯನ್ ಗೆ ಸೇರಿದ ವಿಲ್ಲಾದಲ್ಲಿ ಡ್ರಗ್ಸ್ ಪಾರ್ಟಿ ನಡೆಸಲಾಗಿದೆ ಅನ್ನೋ ಆರೋಪ ಕೇಳಿಬಂದಿತ್ತು.

ಈ ಹಿನ್ನೆಲೆಯಲ್ಲೀಗ ಮೂವರು ಕೂಡ ಸಿಸಿಬಿ ಅಧಿಕಾರಿಗಳಿಗೆ ಮಾಹಿತಿ ಹಾಗೂ ದಾಖಲೆಗಳನ್ನು ನೀಡಿದ್ದಾರೆ ಎನ್ನಲಾಗುತ್ತಿದ್ದು. ಮತ್ತೆ ವಿಚಾರಣೆಗೆ ಹಾಜರಾಗುವಂತೆ ಸೂಚನೆಯನ್ನು ನೀಡಿದ್ದಾರೆ. ವಿಚಾರಣೆಯ ಬಳಿಕ ಯುವರಾಜ್ ಆಪ್ತರು ಬಿಗಿ ಭದ್ರತೆಯೊಂದಿಗೆ ಮನೆಗೆ ಕರೆದೊಯ್ದಿದ್ದಾರೆ.

ಇನ್ನು ವಿಚಾರಣೆಯ ಬಳಿಕ ಮಾತನಾಡಿದ ಅಕುಲ್ ಬಾಲಾಜಿ, ಡ್ರಗ್ಸ್ ಮಾಫಿಯಾ ಎಷ್ಟು ದೊಡ್ಡದು ಅಂತಾ ಗೊತ್ತಾಗಿದೆ. ವಿಚಾರಣೆಯ ವೇಳೆಯಲ್ಲಿ ನಾನು ಸಹಕಾರವನ್ನು ನೀಡಿದ್ದೇಣೆ. ಗೊತ್ತಿರುವ ವಿಚಾರವನ್ನು ತಿಳಿಸಿದ್ದೇನೆ. ಸಿಸಿಬಿ ಅಧಿಕಾರಿಗಳು ಒಳ್ಳೆಯ ಕೆಲಸವನ್ನು ಮಾಡುತ್ತಿದ್ದಾರೆ. ವಿಚಾರಣೆಗೆ ಸಹಕಾರ ಕೊಟ್ಟಿದ್ದೇನೆ. ಮತ್ತೆ ಕರೆದರೆ ಖಂಡಿತಾ ನಾನು ಹೋಗುತ್ತೇನೆ ಎಂದು ಹೇಳಿದ್ದಾರೆ.

ಇನ್ನು ಸಂತೋಷ್ ಆರ್ಯನ್ ಕೂಡ ಪ್ರತಿಕ್ರಿಯೆ ನೀಡಿದ್ದಾರೆ. ಸಿಸಿಬಿ ತನಿಖೆಯ ವೇಳೆಯಲ್ಲಿ ನನಗೆ ಶಾಕ್ ಆಗಿದೆ. ನಾನು ಹಲವರ ಹೆಸರುಗಳನ್ನು ಸಿಸಿಬಿ ಅಧಿಕಾರಿಗಳಿಗೆ ಹೇಳಿದ್ದೇನೆ. ನಾನು ವಿಚಾರಣೆಗೆ ಎಲ್ಲಾ ರೀತಿಯ ಸಹಕಾರವನ್ನೂ ನೀಡಿದ್ದೇನೆ. ಮುಂದಿನ ದಿನಗಳಲ್ಲಿ ವಿಚಾರಣೆಗೆ ಕರೆದರೆ ಖಂಡಿತಾ ಹಾಜರಾಗುತ್ತೇನೆ ಎಂದು ಹೇಳಿದ್ದಾರೆ.

Leave A Reply

Your email address will not be published.