ಸೋಮವಾರ, ಜೂನ್ 16, 2025
HomeBreakingಮಾರ್ಚ್ 31ರ ವರೆಗೆ ಎಲ್ಲಾ ಶಿಕ್ಷಕರಿಗೂ ರಜೆ

ಮಾರ್ಚ್ 31ರ ವರೆಗೆ ಎಲ್ಲಾ ಶಿಕ್ಷಕರಿಗೂ ರಜೆ

- Advertisement -

ಬೆಂಗಳೂರು : ಕೊರೊನಾ ಭೀತಿಯ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಶಾಲೆಗಳ ಶಿಕ್ಷಕರಿಗೆ ಮಾರ್ಚ್ 31ರ ವರೆಗೆ ರಜೆಯನ್ನು ಘೋಷಿಸಲಾಗಿದೆ.

ಈ ಹಿಂದೆ 1 ರಿಂದ 9ನೇ ತರಗತಿ ವರೆಗಿನ ಮಕ್ಕಳಿಗೆ ಪರೀಕ್ಷೆಯನ್ನು ರದ್ದುಗೊಳಿಸಿ ರಜೆ ಘೋಷಿಸಲಾಗಿತ್ತು. ಆದರೆ ಶಿಕ್ಷಕರು ಶಾಲೆಗೆ ಬರುವಂತೆ ಸೂಚನೆಯನ್ನು ಹೊರಡಿಸಲಾಗಿತ್ತು. ಆದರೀಗ ಎಸ್ಎಸ್ಎಲ್ ಸಿ ಪರೀಕ್ಷೆಗಳನ್ನು ಮುಂದೂಡಿರೋ ರಾಜ್ಯ ಸರಕಾರ ಮುನ್ನೆಚ್ಚರಿಕೆಯ ಕ್ರಮವಾಗಿ ರಾಜ್ಯದ ಎಲ್ಲಾ ಶಾಲೆಗಳ ಶಿಕ್ಷಕರಿಗೂ ಮಾರ್ಚ್ 31ರ ವರೆಗೂ ರಜೆಯನ್ನು ಘೋಷಿಸಿದೆ.

ಶಿಕ್ಷಕರು ಹಾಗೂ ಬೋಧಕೇತರ ಸಿಬ್ಬಂಧಿಗಳು ಶಾಲಾ ಚಟುವಟಿಕೆಗಳನ್ನು ಮನೆಯಿಂದಲೇ ನಿರ್ವಹಿಸುವಂತೆ ಸೂಚನೆ ನೀಡಲಾಗಿದೆ. ಶಾಲಾ ಶಿಕ್ಷಕರಿಗೆ ರಜೆ ನೀಡದ ಶಿಕ್ಷಣ ಇಲಾಖೆಯ ಕ್ರಮದ ವಿರುದ್ದ ನ್ಯೂಸ್ ನೆಕ್ಟ್ಸ್ ವರದಿಯನ್ನು ಪ್ರಸಾರ ಮಾಡಿತ್ತು. ಈ ಹಿನ್ನೆಲೆಯಲ್ಲಿ ಸರಕಾರ ಕ್ರಮಕೈಗೊಂಡಿದೆ.

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular