ಗ್ರೀನ್ ಝೋನ್ ಶಿವಮೊಗ್ಗಕ್ಕೂ ಮಹಾಮಾರಿ : ಸಿಎಂ ತವರಿಗೆ ಕಂಟಕವಾಗ್ತಾರಾ ತಬ್ಲಿಘಿಗಳು ?

0

ಶಿವಮೊಗ್ಗ : ಸಿಎಂ ತವರು ಜಿಲ್ಲೆ ಶಿವಮೊಗ್ಗಕ್ಕೂ ಕೂಡ ಕೊರೊನಾ ಸೋಂಕು ವ್ಯಾಪಿಸಿದೆ. ಗ್ರೀನ್ ಝೋನ್ ವ್ಯಾಪ್ತಿಯಲ್ಲಿದ್ದ ಮಲೆನಾಡಿನ ಜಿಲ್ಲೆಯಲ್ಲಿ ಇಂದು ಒಂದೇ ದಿನ 8 ಮಂದಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಈ ಕುರಿತು ಸುದ್ದಿಗೋಷ್ಠಿ ನಡೆಸಿರುವ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಈ ವಿಚಾರವನ್ನು ಖಚಿತ ಪಡಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯಲ್ಲಿ ಇದುವರೆಗೂ ಕೊರೊನಾ ಸೋಂಕು ಪತ್ತೆಯಾಗಿರಲಿಲ್ಲ. ಜಿಲ್ಲಾಡಳಿತ ಜಿಲ್ಲೆಯಾದ್ಯಂತ ಕಟ್ಟುನಿಟ್ಟಿನ ಕ್ರಮಕೈಗೊಂಡಿತ್ತು. ಆದ್ರೀಗ ಅಹಮದಾಬಾದ್ ನಿಂದ ಆಗಮಿಸಿದ್ದ 9 ಮಂದಿ ತಬ್ಲಿಘಿಗಳ ಪೈಕಿ 8 ಮಂದಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಇದರಿಂದ ಜಿಲ್ಲೆಯಾದ್ಯಂತ ಆತಂಕ ಶುರುವಾಗಿದೆ.

ಈ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲಾಗಿದೆ ಎಂದು ಸಚಿವ ಈಶ್ವರಪ್ಪ ತಿಳಿಸಿದ್ದಾರೆ.

Leave A Reply

Your email address will not be published.