ಶಿವಮೊಗ್ಗ : ಹುಣಸೋಡು ಗ್ರಾಮದ ಬಳಿಯಲ್ಲಿರುವ ಕ್ರಶರ್ ನಲ್ಲಿ ನಡೆದ ಸ್ಪೋಟದಲ್ಲಿ ಸುಮಾರು 15ಕ್ಕೂ ಅಧಿಕ ಕಾರ್ಮಿಕರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗುತ್ತಿದೆ. ಇದುವರೆ 5 ಮಂದಿ ಕಾರ್ಮಿಕರ ಮೃತದೇಹ ಪತ್ತೆಯಾಗಿದೆ.
ಕಳೆದ ಹಲವು ವರ್ಷಗಳಿಂದಲೂ ಹುಣಸೋಡು ಗ್ರಾಮದ ಬಳಿಯಲ್ಲಿ ಶಿವಮೊಗ್ಗ ಹೊರವಲಯದ ಹುಣಸೋಡು ಬಳಿ ರೈಲ್ವೆ ಕ್ರಷರ್ ಗೆ ಜಿಲೆಟಿನ್ ಕಡ್ಡಿ ತಂದಿದ್ದ ಲಾರಿ ಸ್ಪೋಟಗೊಂಡಿದೆ. ಆರು ಛಿದ್ರಗೊಂಡ ದೇಹಗಳು ಪತ್ತೆಯಾಗಿದ್ದು ಲಾರಿಗೆ ಸಂಪೂರ್ಣ ಹಾನಿಯಾಗಿದೆ. ಸುತ್ತಮುತ್ತಲ ಪ್ರದೇಶದಲ್ಲಿ ಕೆಟ್ಟ ವಾಸನೆ ಹರಡಿದ್ದು ದುರಂತ ನಡೆದ ಸ್ಥಳವನ್ನು ಪ್ರವೇಶಿಸಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಲಘು ಭೂಕಂಪದ ನಂತರ ಲಾರಿಯಲ್ಲಿನ ಜಿಲೆಟಿನ್ ಕಡ್ಡಿಗಳು ಸ್ಪರ್ಶಗೊಂಡು ಅನಾಹುತ ಸಂಭವಿಸಿರುವ ಸಾಧ್ಯತೆ ಇದೆ. ಕಿಲೋಮೀಟರ್ವರೆಗೆ ಮನೆಗಳ ಗಾಜು, ಕಿಟ ಒಡೆದು ಹೋಗಿದ್ದು ಮನೆಗಳ ಗೋಡೆ ಬಿರುಕು ಬಿಟ್ಟಿವೆ.
ಗುರುವಾರ ರಾತ್ರಿ 10.20ರ ಸಮಯದಲ್ಲಿ ದೊಡ್ಡ ಪ್ರಮಾಣದಲ್ಲಿ ಸ್ಫೋಟ ಸಂಭವಿಸಿದ್ದು, ಬಿಹಾರ ಮೂಲದ 8 ಕಾರ್ವಿುಕರು ಮೃತಪಟ್ಟಿದ್ದಾರೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಿರುವ ಸಾಧ್ಯತೆ ಇದೆ ಎನ್ನಲಾಗಿದೆ.ಸ್ಫೋಟ ಸಂಭವಿಸಿದ ಪ್ರದೇಶದಲ್ಲಿ ಎಷ್ಟು ಜನ ಇದ್ದರು ಎಂಬುದು ಗೊತ್ತಾಗಿಲ್ಲ. ಮೃತ ದೇಹಗಳು ಅಲ್ಲಲ್ಲಿ ಛಿದ್ರಗೊಂಡು ಬಿದ್ದಿರುವುದು ಘಟನೆಯ ಭೀಕರತೆಗೆ ಸಾಕ್ಷಿಯಾಗಿತ್ತು. ಸ್ಪೋಟದಿಂದಲೇ ದುರಂತ ಸಂಭವಿಸಿರುವುದು ದೃಢಪಟ್ಟಿದೆ. ಆದರೆ ಸ್ಪೋಟಕ್ಕೆ ಏನು ಕಾರಣ ಎಂಬುದು ಗೊತ್ತಾಗಿಲ್ಲ. ಲಾರಿಯಲ್ಲಿ ಸ್ಪೋಟಕಗಳನ್ನು ತರಲಾಗಿದ್ದು, ಈ ಲಾರಿಯೇ ಸ್ಪೋಟಗೊಂಡಿದೆ ಎಂದು ಹೇಳಲಾಗುತ್ತಿದೆ.
ದುರಂತ ಸಂಭವಿಸಿದ ಸ್ಥಳದಲ್ಲಿ ಕತ್ತಲು ಇರುವುದರಿಂದ ಕಾರ್ಯಾಚರಣೆಗೂ ಸಮಸ್ಯೆಯಾಗಿದ್ದು, ಇದೀಗ ಮತ್ತೆ ಕಾರ್ಯಾಚರಣೆಯನ್ನು ನಡೆಸಲಾಗುತ್ತಿದೆ.ಇನ್ನು ಭಾರೀ ಸ್ಪೋಟ ಸಂಭವಿಸುತ್ತಿದ್ದಂತೆಯೇ ಸ್ಥಳೀಯರು ಭೂಕಂಪವಾಗಿದೆ ಅನ್ನೋ ಆತಂಕ ಎದುರಾಗಿತ್ತು. ಹೀಗಾಗಿ ಮನೆಯಲ್ಲಿದ್ದವರು ಹೊರಗೆ ಓಡಿ ಬಂದಿದ್ದಾರೆ. ಆದರೆ ನಂತರದಲ್ಲಿ ಕ್ರಷರ್ ನಲ್ಲಿ ಸ್ಪೋಟ ನಡೆದಿರೋದು ಬೆಳಕಿಗೆ ಬಂದಿದೆ. ಗಣಿಗಾರಿಕೆಯ ವಿರುದ್ದ ಸ್ಥಳೀಯರು ಸಾಕಷ್ಟು ಬಾರಿ ದೂರುಗಳನ್ನು ಕೊಟ್ಟಿದ್ದರು ಕೂಡ ಅಧಿಕಾರಿಗಳು ಯಾವುದೇ ಕ್ರಮಗಳನ್ನು ಕೈಗೊಂಡಿಲ್ಲ. ಹೀಗಾಗಿ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.