ಭಾನುವಾರ, ಏಪ್ರಿಲ್ 27, 2025
HomeBreakingಬಿರಿಯಾನಿ ಆಸೆಗೆ 2 ಲಕ್ಷ ರೂಪಾಯಿ ಕಳೆದುಕೊಂಡ ಆಟೋ ಚಾಲಕ !

ಬಿರಿಯಾನಿ ಆಸೆಗೆ 2 ಲಕ್ಷ ರೂಪಾಯಿ ಕಳೆದುಕೊಂಡ ಆಟೋ ಚಾಲಕ !

- Advertisement -

ಬೆಂಗಳೂರು : ಬ್ಯಾಂಕ್‌ ಸಾಲ ಕಟ್ಟುವ ಸಲುವಾಗಿ ಮನೆಯಲ್ಲಿದ್ದ ಚಿನ್ನಾಭರಣಗಳನ್ನು ಒತ್ತೆ ಇಟ್ಟು ಆಟೋ ಚಾಲಕರೊಬ್ಬರು 2 ಲಕ್ಷ ರೂಪಾಯಿ ಸಾಲ ಪಡೆದುಕೊಂಡಿದ್ದರು. ದಾರಿ ಮಧ್ಯೆ ಬರುತ್ತಿರುವಾಗ ಬಿರಿಯಾನಿ ತಿನ್ನುವ ಆಸೆಯಿಂದ ಹೋಟೆಲ್‌ಗೆ ಹೋಗಿದ್ದಾರೆ. ಈ ವೇಳೆಯಲ್ಲಿ ಹಣವನ್ನು ಬೈಕಿನಲ್ಲಿಟ್ಟು ಬಿರಿಯಾನಿ ತಿಂದು ವಾಪಾಸ್‌ ಬಂದಿದ್ದಾರೆ. ಬೈಕಿನಲ್ಲಿದ್ದ ಹಣ ಕಳವಾಗಿತ್ತು.

ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಆಟೋ ಚಾಲಕರಾಗಿರುವ ಹನುಮಂತರಾಯ ಬ್ಯಾಂಕ್‍ನಲ್ಲಿ ಸಾಲ ಮಾಡಿಕೊಂಡಿದ್ದರು. ಕೊರೊನಾ ಹಿನ್ನೆಲೆಯಲ್ಲಿ ಸಾಲದ ಕಂತು ಪಾವತಿ ಮಾಡೋದಕ್ಕೆ ಹನುಮಂತ ರಾಯ ಅವರಿಂದ ಸಾಧ್ಯವಾಗಿರಲಿಲ್ಲ. ಇದಕ್ಕಾಗಿಯೇ ಮನೆಯಲ್ಲಿದ್ದ ಎಲ್ಲಾ ಚಿನ್ನಾಭರಣವನ್ನು ಅಡವಿಟ್ಟು ಎರಡು ಲಕ್ಷ ರೂಪಾಯಿ ಸಾಲ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: Wife sale for mobile : ಪತ್ನಿಯನ್ನೇ ಮಾರಾಟ ಮಾಡಿ ಮೊಬೈಲ್ ಖರೀದಿಸಿದ ಪತಿ !

ಬಿರಿಯಾನಿ ತಿಂದ ಬಳಿಕ ಬೈಕಿನಲ್ಲಿದ್ದ ಹಣವನ್ನು ಪರಿಶೀಲಿಸಿದ ವೇಳೆಯಲ್ಲಿ ಹಣ ನಾಪತ್ತೆಯಾಗಿರೋದು ಬೆಳಕಿಗೆ ಬಂದಿದೆ. ಕೂಡಲೇ ಅಕ್ಕಪಕ್ಕದ ಅಂಗಡಿಯಲ್ಲಿರುವ ಸಿಸಿ ಕ್ಯಾಮರಾ ಪರಿಶೀಲನೆ ಮಾಡಿದ ವೇಳೆಯಲ್ಲಿ ಕಳವು ಮಾಡಿರುವುದು ಖಚಿತವಾಗಿತ್ತು. ಈ ಕುರಿತು ಬ್ಯಾಡರಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸಿಸಿ ಕ್ಯಾಮರಾ ದೃಶ್ಯಾವಳಿಗಳನ್ನು ಆಧರಿಸಿ ತನಿಖೆಯನ್ನು ಆರಂಭಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಇಂತಹ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದ್ದರೂ ಕೂಡ ಜನರು ಮಾತ್ರ ಮೈಮರೆಯುತ್ತಿದ್ದಾರೆ. ಇನ್ನಾದ್ರೂ ಹಣವನ್ನು ವ್ಯವಹೃಿಸುವ ವೇಳೆಯಲ್ಲಿ ಎಚ್ಚರವಾಗಿರೋದು ಒಳಿತು.

ಇದನ್ನೂ ಓದಿ: Namma Metro : ನಮ್ಮ ಮೆಟ್ರೋಗೆ ದಶಕದ ಸಂಭ್ರಮ : 60 ಕೋಟಿ ಜನರ ಪ್ರಯಾಣ, 1286.6 ಕೋಟಿ ರೂ. ಆದಾಯ

(Auto driver loses Rs 2 lakh for Biryani’s wish!)

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular