ಬೇಸಿಗೆ ರಜೆ ರದ್ದು ಮಾಡಲ್ಲ, ಕಡಿತಗೊಳಿಸುವ ಚಿಂತನೆ : ಸಚಿವ ಸುರೇಶ್ ಕುಮಾರ್

ಬೆಳಗಾವಿ : ವರ್ಷಂಪ್ರತಿಯಂತೆ ಈ ಬಾರಿಯೂ ಶಾಲೆಗಳಿಗೆ ಬೇಸಿಗೆ ರಜೆಯನ್ನು ನೀಡುತ್ತೇವೆ. ಯಾವುದೇ ಕಾರಣಕ್ಕೂ ಬೇಸಿಗೆ ರಜೆಯನ್ನು ರದ್ದು ಮಾಡುವುದಿಲ್ಲ. ಆದರೆ ರಜೆಯನ್ನು ಕಡಿತ ಮಾಡುವ ಕುರಿತು ಚಿಂತನೆಯಿದೆ ಎಂದು ಪ್ರೌಢ ಹಾಗೂ ಪ್ರಾಥಮಿಕ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದ್ದಾರೆ.

ಬೆಳಗಾವಿ ಜಿಲ್ಲೆಯ ಖಾನಾಪುರದ ಶಾಲೆಗೆ ಭೇಟಿ ನೀಡಿದ ಅವರು, ಮಾಧ್ಯಮದವರೊಂದಿಗೆ ಮಾತನಾಡಿದ್ರು. ಕೊರೊನಾ ಸೋಂಕಿನ ನಡುವಲ್ಲೇ ಶಾಲೆಗಳು ಆರಂಭವಾಗಿದೆ. ಶೈಕ್ಷಣಿಕ ವರ್ಷ ತಡವಾಗಿ ಆರಂಭವಾದ ಹಿನ್ನೆಲೆಯಲ್ಲಿ ಬೇಸಿಗೆ ರಜೆಯನ್ನು ಕಡಿತ ಮಾಡಲಾಗುತ್ತೆ ಅನ್ನೋ ಮಾತುಗಳು ಕೇಳಿಬಂದಿದ್ದವು. ಆದರೆ ಇದೀಗ ಶಿಕ್ಷಣ ಸಚಿವರೇ ಖುದ್ದು ಬೇಸಿಗೆ ರಜೆಯ ಬಗ್ಗೆ ಸ್ಪಷ್ಟನೆಯನ್ನು ನೀಡಿದ್ದಾರೆ.

https://kannada.newsnext.live/mother-hack-own-son-death-sacrifice-to-god-in-kerala/

ಕೋವಿಡ್ ಸೇರಿ ಬೇರೆ ಬೇರೆ ಕಾರಣಗಳಿಂದ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಶಾಲೆಗೆ ಕರೆತರಲು ಎಲ್ಲಾ ಪ್ರಯತ್ನ ಜಾರಿಯಲ್ಲಿದೆ. ಮಕ್ಕಳ ಭವಿಷ್ಯದ ದೃಷ್ಟಿಯಿಂದ ಎಲ್ಲಾ ನೆರವು ನೀಡಲು ಶಿಕ್ಷಣ ಇಲಾಖೆ ಸಿದ್ದವಾಗಿದೆ ಎಂದು ಅವರು ಹೇಳಿದ್ದಾರೆ.

Comments are closed.