ಕೊರೋನಾ ನಿಯಂತ್ರಣಕ್ಕೆ ಕೈಜೋಡಿಸಿದ ತಲೈವಾ…! ಸಿಎಂ ಪರಿಹಾರ ನಿಧಿಗೆ 50 ಲಕ್ಷ ಕೊಡುಗೆ…!!

ಕೊವೀಡ್ ಎರಡನೇ ಅಲೆಯ ಸಂಕಷ್ಟ ದೇಶದಾದ್ಯಂತ ವ್ಯಾಪಿಸಿದ್ದು, ಸರ್ಕಾರಗಳು ಜನತೆಗೆ ಅಗತ್ಯ ಔಷಧಿಗಳು, ಆಕ್ಸಿಜನ್, ಐಸಿಯು ಬೆಡ್ ಒದಗಿಸಲು ಪರದಾಡುತ್ತಿದ್ದಾರೆ. ಹೀಗಿರುವಾಗಲೇ ಸರ್ಕಾರದ ಜೊತೆ ಕೈಜೋಡಿಸಿರುವ ಸೂಪರ್ ಸ್ಟಾರ್ ರಜನಿಕಾಂತ್ ಪರಿಹಾರ ನಿಧಿಗೆ ಹಣ ನೀಡಿದ್ದಾರೆ.

https://kannada.newsnext.live/sandalwood-actor-chetan-write-letter-to-cm-cemetry-workershelp/

ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ರನ್ನು ಭೇಟಿ ಮಾಡಿದ  ಸೂಪರ್ ಸ್ಟಾರ್ ರಜನಿಕಾಂತ್ 50 ಲಕ್ಷ ರೂಪಾಯಿ ದೇಣಿಗೆಯ ಚೆಕ್ ನ್ನು ಹಸ್ತಾಂತರಿಸಿದ್ದಾರೆ.

https://kannada.newsnext.live/corona-patient-no-steroid-minister-sudhakar/

ಕೊವೀಡ್-19 ವಿರುದ್ಧದ ಹೋರಾಟದಲ್ಲಿ ಜನರು ಸರ್ಕಾರದ ಜೊತೆ ಕೈಜೋಡಿಸುವಂತೆ  ಹಾಗೂ ಸಿಎಂ ಪರಿಹಾರ ನಿಧಿಗೆ ಹಣ ಕೊಡುಗೆಯಾಗಿ ನೀಡುವಂತೆ ಮುಖ್ಯಮಂತ್ರಿ ಸ್ಟಾಲಿನ್ ಮನವಿ ಮಾಡಿದ್ದರು. ಇದರ ಬಳಿಕ ಸೂಪರ್ ಸ್ಟಾರ್ ರಜನಿಕಾಂತ್ ದಾನ ಮಾಡಿದ್ದಾರೆ.

ಸರ್ಕಾರಕ್ಕೆ 50 ಲಕ್ಷ ರೂಪಾಯಿ ಕೊಡುಗೆ ನೀಡಿದ ಬಳಿಕ ಸೂಪರ್ ಸ್ಟಾರ್ ರಜನಿಕಾಂತ್,  ಜನರಿಗೆ ಕೊವೀಡ್ ನಿಯಂತ್ರಣದ ನಿಟ್ಟಿನಲ್ಲಿ  ಸರ್ಕಾರ ರೂಪಿಸಿದ ನಿಯಮಗಳನ್ನು ಪಾಲಿಸುವಂತೆ ಮನವಿ ಮಾಡಿದ್ದಾರೆ.

https://kannada.newsnext.live/kannada-smallscreen-ginirama-serial-actor-nayananagraj/

ತಮಿಳುನಾಡಿನಲ್ಲಿ ರವಿವಾರವೊಂದೇ ದಿನ  12,450  ಹೊಸ ಕೊವೀಡ್ ಪ್ರಕರಣಗಳು ವರದಿಯಾಗಿದ್ದು, 20,905 ಜನರು ಗುಣಮುಖರಾಗಿದ್ದಾರೆ ಹಾಗೂ 303 ಸಾವಿನ ಪ್ರಕರಣಗಳು ವರದಿಯಾಗಿವೆ.

Comments are closed.