ಗ್ಯಾಸ್ ಟ್ಯಾಂಕರ್ ಪಲ್ಟಿ : ತಪ್ಪಿತು ಬಾರೀ ದುರಂತ

0

ಉಪ್ಪಿನಂಗಡಿ : ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಟ್ಯಾಂಕರೊಂದು ಪಲ್ಟಿಯಾದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬೆದ್ರೋಡಿ ಬಳಿ ಈ ಘಟನೆ ನಡೆದಿದ್ದು, ಟ್ಯಾಂಕರ್ ನಿಂದ ಗ್ಯಾಸ್ ಸೋರಿಕೆಯಾಗಿದೆ.

ಉಪ್ಪಿನಂಗಡಿಯಲ್ಲಿದ್ದ HPCLಕಂಪೆನಿಯ ತುರ್ತು ಪರಿಸ್ಥಿತಿ ವಾಹನದವರು ಸ್ಥಳಕ್ಕೆ ಆಗಮಿಸಿ ಗ್ಯಾಸ್ ಸೋರಿಕೆಯನ್ನು ತಡೆಗಟ್ಟಲು ವ್ಯವಸ್ಥೆ ಮಾಡುತ್ತಿದ್ದಾರೆ.

ಬಂದ್ ಹಿನ್ನೆಲೆಯಲ್ಲಿ ರಸ್ತೆಯಲ್ಲಿ ಹೆಚ್ಚಿನ ವಾಹನಗಳು ಬರುತ್ತಿಲ್ಲವಾದರೂ, ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರವನ್ನು ಸಂಪೂರ್ಣ ಬಂದ್ ಮಾಡಲಾಗಿದೆ.

Leave A Reply

Your email address will not be published.