ಜಾರಕಿಹೊಳಿ ರಾಜೀನಾಮೆಯ ಬಗ್ಗೆ ಪಕ್ಷ ನಿರ್ಧಾರ ಮಾಡಲಿದೆ : ಗೃಹ ಸಚಿವ ಬೊಮ್ಮಾಯಿ

ಬೆಂಗಳೂರು : ಸಚಿವ ರಮೇಶ್ ಜಾರಕಿಹೊಳಿ ರಾಜೀನಾಮೆಗೆ ಸಂಬಂಧಿಸಿದಂತೆ ಪಕ್ಷ ಹಾಗೂ ಹೈಕಮಾಂಡ್ ನಿರ್ಧಾರವನ್ನು ಕೈಗೊಳ್ಳಲಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಚಿವ ರಮೇಶ್ ಜಾರಕಿಹೊಳಿ ಅವರ ವಿರುದ್ದ ದೂರು ದಾಖಲಾಗಿರುವ ಹಿನ್ನೆಲೆಯಲ್ಲಿ ಕಾನೂನಿನ ಪ್ರಕಾರ ತನಿಖೆಯನ್ನು ನಡೆಸಲಾಗುತ್ತಿದೆ. ಕೂಲಂಕುಷವಾಗಿ ಪರಿಶೀಲನೆಯನ್ನು ನಡೆಸಿ ನಿಷ್ಪಕ್ಷಪಾತವಾಗಿ ತನಿಖೆಯನ್ನು ನಡೆಸಲಾಗುತ್ತದೆ ಎಂದಿದ್ದಾರೆ.

ಕೇವಲ ದೂರನ್ನು ನೀಡಲಾಗಿದೆ. ಆದರೆ ಸಂತ್ರಸ್ತೆ ಇದುವರೆಗೂ ದೂರನ್ನು ನೀಡಿಲ್ಲ. ದೂರು ಬಂದ ಹಿನ್ನೆಲೆಯಲ್ಲಿ ತನಿಖೆ ನಡೆಯುತ್ತಿದೆ. ಸಿಎಂ ಯಡಿಯೂರಪ್ಪ, ಪಕ್ಷ ಹಾಗೂ ಹೈಕಮಾಂಡ್ ಎಲ್ಲವನ್ನೂ ಗಮನಿಸುತ್ತಿದ್ದಾರೆ. ಈ ಕುರಿತು ಹಿರಿಯರು ಕಾನೂನಿನ ಅಡಿಯಲ್ಲಿ ನಿರ್ಧಾರವನ್ನು ಕೈಗೊಳ್ಳಲಿದ್ದಾರೆ ಎಂದಿದ್ದಾರೆ.

Comments are closed.