ಮಂಗಳವಾರ, ಜೂನ್ 17, 2025
HomeBreakingಮುರುಡೇಶ್ವರ ನಿರ್ಮಾಣದ ಕರ್ತೃ, ಖ್ಯಾತ ಉದ್ಯಮಿ ಆರ್.ಎನ್.ಶೆಟ್ಟಿ ನಿಧನ

ಮುರುಡೇಶ್ವರ ನಿರ್ಮಾಣದ ಕರ್ತೃ, ಖ್ಯಾತ ಉದ್ಯಮಿ ಆರ್.ಎನ್.ಶೆಟ್ಟಿ ನಿಧನ

- Advertisement -

ಕಾರವಾರ : ಮುರುಡೇಶ್ವರ ನಿರ್ಮಾಣದ ಕರ್ತೃ, ಉದ್ಯಮಿ ಆರ್.ಎನ್.ಶೆಟ್ಟಿ (93 ವರ್ಷ) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಹಲವು ವರ್ಷಗಳಿಂದಲೂ ಬೆಂಗಳೂರಿನಲ್ಲಿ ನೆಲೆಸಿದ್ದ ಆರ್.ಎನ್.ಶೆಟ್ಟಿ ಅವರು, ಮನೆಯಲ್ಲಿಯೇ ಬೆಳಗಿನ ಜಾವ 3.30ರ ಸುಮಾರಿಗೆ ನಿಧನರಾಗಿದ್ದಾರೆ.

ಭಟ್ಕಳ ತಾಲೂಕಿನ ಮುರುಡೇಶ್ವರದಲ್ಲಿ 1928ರ ಅಗಸ್ಟ್ 15ರಂದು ಜನಿಸಿದ ರಾಮ ನಾಗಪ್ಪ ಶೆಟ್ಟಿ ಅವರು ಮುರುಡೇಶ್ವರದ ಅಭಿವೃದ್ದಿ ಶ್ರಮಿಸಿದ್ದಾರೆ. ಮಾತ್ರವಲ್ಲ ಮುರುಡೇಶ್ವರದಲ್ಲಿ 123 ಅಡಿ ಎತ್ತರದ ಶಿವನಮೂರ್ತಿಯನ್ನು ನಿರ್ಮಾಣ ಮಾಡಿದ ಕೀರ್ತಿಗೆ ಪಾತ್ರರಾಗಿದ್ದಾರೆ.
ಆರ್.ಎನ್.ಶೆಟ್ಟಿ ಆಂಡ್ ಕಂಪೆನಿಯ ಮೂಲಕ ನಿರ್ಮಾಣ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.

ಹೋಟೆಲ್, ವೈದ್ಯಕೀಯ, ಶಿಕ್ಷಣ, ಹೋಟೆಲ್ ಉದ್ಯಮದ ಮೂಲಕ ಖ್ಯಾತ ಉದ್ಯಮಿಯಾಗಿ ಗುರುತಿಸಿಕೊಂಡಿದ್ದಾರೆ. ಮಾತ್ರವಲ್ಲ ಸಮಾಜಮುಖಿ ಕಾರ್ಯಗಳ ಮೂಲಕ ದೇಶ ವಿದೇಶಗಳಲ್ಲಿಯೂ ಸಮಾನ ಸೇವೆಯನ್ನು ಮಾಡಿದ್ದಾರೆ. ಸಮಾಜ ಸೇವೆಯನ್ನು ಗುರುತಿಸಿ ಬೆಂಗಳೂರು ವಿಶ್ವವಿದ್ಯಾಲಯ 2009-10ರಲ್ಲಿ ಗೌರವ ಡಾಕ್ಟರೇಟ್ ಪದವಿಯನ್ನು ನೀಡಿ ಗೌರವಿಸಿದೆ.

ಆರ್.ಎನ್.ಶೆಟ್ಟಿ ಅವರು ಪತ್ನಿ, ಮೂರು ಗಂಡು, ನಾಲ್ಕು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಮೃತರ ಅಂತ್ಯಸಂಸ್ಕಾರ ಬೆಂಗಳೂರಿನ್ಲಲಿ ನಡೆಯಲಿದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶ್ರದ್ದಾಂಜಲಿ ಸಲ್ಲಿಸಿದ್ದಾರೆ.

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular