ಉಡುಪಿಯಲ್ಲಿ ನಾಳೆಯಿಂದ ಸೀಲ್ ಡೌನ್ ಇಲ್ಲ : ಡಿಸಿ ಜಗದೀಶ್

0

ಉಡುಪಿ : ರಾಜ್ಯ ಸರಕಾರದ ಲಾಕ್ ಡೌನ್ ಆದೇಶವನ್ನು ತೆರವುಗೊಳಿಸಿದ ಬೆನ್ನಲ್ಲೇ ಉಡುಪಿಯಲ್ಲಿ ಸೀಲ್ ಡೌನ್ ಆದೇಶವನ್ನು ಹಿಂಪಡೆಯಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯದ ಯಾವುದೇ ಭಾಗಗಳಲ್ಲಿಯೂ ಲಾಕ್ ಡೌನ್ ಆದೇಶ ಹೊರಡಿಸುವಂತಿಲ್ಲ ಎಂದು ಆದೇಶಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆಯಿಂದ ಸೀಲ್ ಡೌನ್ ಆದೇಶವನ್ನು ಹಿಂಪಡೆಯಲಾಗಿದ್ದು, ಬಸ್ ಸಂಚಾರ ಆರಂಭವಾಗಲಿದೆ ಎಂದು ಅವರು ತಿಳಿಸಿದ್ದಾರೆ.

Leave A Reply

Your email address will not be published.