ಮಂಗಳವಾರ, ಜೂನ್ 17, 2025
HomeBreakingಉಡುಪಿಯಿಂದ ಬಾದಾಮಿಗೆ ತೆರಳಿದ್ದ ವಿದ್ಯಾರ್ಥಿನಿಗೆ ಕೊರೊನಾ : ಆತಂಕ ಬೇಡವೆಂದ ಜಿಲ್ಲಾಧಿಕಾರಿ ಜಿ.ಜಗದೀಶ್

ಉಡುಪಿಯಿಂದ ಬಾದಾಮಿಗೆ ತೆರಳಿದ್ದ ವಿದ್ಯಾರ್ಥಿನಿಗೆ ಕೊರೊನಾ : ಆತಂಕ ಬೇಡವೆಂದ ಜಿಲ್ಲಾಧಿಕಾರಿ ಜಿ.ಜಗದೀಶ್

- Advertisement -

ಉಡುಪಿ : ಬಾದಾಮಿಗೆ ಉಡುಪಿಯಿಂದ ತೆರಳಿದ್ದ ವಿದ್ಯಾರ್ಥಿನಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಆದರೆ ಆಕೆಗೆ ಸ್ಥಳೀಯ ಸಂಪರ್ಕದಿಂದಲೇ ಕೊರೊನಾ ಬಂದಿದೆ. ಹೀಗಾಗಿ ಉಡುಪಿ ಜಿಲ್ಲೆಯ ಜನತೆ ಆತಂಕ ಪಡುವುದು ಬೇಡಾ ಅಂತಾ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರು ಸ್ಪಷ್ಟನೆ ನೀಡಿದ್ದಾರೆ.

Corona Test 2 E1587238385337
Alvas1

ನಿಟ್ಟೆಯ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿನಿಯೋರ್ವಳು ಮಾರ್ಚ್ 14 ರಂದು ಉಡುಪಿಯಿಂದ ಬಾದಾಮಿಗೆ ತೆರಳಿದ್ದಳು. ಆದ್ರೀಗ ವಿದ್ಯಾರ್ಥಿನಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಇದರಿಂದಾಗಿ ಉಡುಪಿ ಜಿಲ್ಲೆಯ ಜನರು ಆತಂಕಕ್ಕೆ ಒಳಗಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಸ್ಪಷ್ಟನೆಯನ್ನು ನೀಡಿದ್ದಾರೆ. ವಿದ್ಯಾರ್ಥಿನಿ ಉಡುಪಿಯಿಂದ ತೆರಳುವಾಗ ಉಡುಪಿ ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಯಾವುದೇ ಕೊರೊನಾ ಸೋಂಕು ಕಾಣಿಸಿಕೊಂಡಿಲ್ಲ.

Udupi Dc City

ಇದೀಗ ಸ್ಥಳೀಯ ಸಂಪರ್ಕದಿಂದಲೇ ಕೊರೊನಾ ಸೋಂಕು ತಗುಲಿದೆ. ಈ ಕುರಿತು ಬಾಗಲಕೋಟೆಯ ಜಿಲ್ಲಾಡಳಿತ ಹಾಗೂ ಜಿಲ್ಲಾ ಎಸ್ಪಿ ಅವರಿಂದ ಮಾಹಿತಿಯನ್ನು ಪಡೆದುಕೊಂಡಿದ್ದೇನೆ. ಹೀಗಾಗಿ ಉಡುಪಿ ಜಿಲ್ಲೆಯ ಜನರು ಯಾವುದೇ ಕಾರಣಕ್ಕೂ ಆತಂಕಕ್ಕೆ ಒಳಗಾಗುವುದು ಬೇಡಾ ಎಂದು ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ.

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular