ಉಡುಪಿಯಿಂದ ಬಾದಾಮಿಗೆ ತೆರಳಿದ್ದ ವಿದ್ಯಾರ್ಥಿನಿಗೆ ಕೊರೊನಾ : ಆತಂಕ ಬೇಡವೆಂದ ಜಿಲ್ಲಾಧಿಕಾರಿ ಜಿ.ಜಗದೀಶ್

0

ಉಡುಪಿ : ಬಾದಾಮಿಗೆ ಉಡುಪಿಯಿಂದ ತೆರಳಿದ್ದ ವಿದ್ಯಾರ್ಥಿನಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಆದರೆ ಆಕೆಗೆ ಸ್ಥಳೀಯ ಸಂಪರ್ಕದಿಂದಲೇ ಕೊರೊನಾ ಬಂದಿದೆ. ಹೀಗಾಗಿ ಉಡುಪಿ ಜಿಲ್ಲೆಯ ಜನತೆ ಆತಂಕ ಪಡುವುದು ಬೇಡಾ ಅಂತಾ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರು ಸ್ಪಷ್ಟನೆ ನೀಡಿದ್ದಾರೆ.

ನಿಟ್ಟೆಯ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿನಿಯೋರ್ವಳು ಮಾರ್ಚ್ 14 ರಂದು ಉಡುಪಿಯಿಂದ ಬಾದಾಮಿಗೆ ತೆರಳಿದ್ದಳು. ಆದ್ರೀಗ ವಿದ್ಯಾರ್ಥಿನಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಇದರಿಂದಾಗಿ ಉಡುಪಿ ಜಿಲ್ಲೆಯ ಜನರು ಆತಂಕಕ್ಕೆ ಒಳಗಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಸ್ಪಷ್ಟನೆಯನ್ನು ನೀಡಿದ್ದಾರೆ. ವಿದ್ಯಾರ್ಥಿನಿ ಉಡುಪಿಯಿಂದ ತೆರಳುವಾಗ ಉಡುಪಿ ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಯಾವುದೇ ಕೊರೊನಾ ಸೋಂಕು ಕಾಣಿಸಿಕೊಂಡಿಲ್ಲ.

ಇದೀಗ ಸ್ಥಳೀಯ ಸಂಪರ್ಕದಿಂದಲೇ ಕೊರೊನಾ ಸೋಂಕು ತಗುಲಿದೆ. ಈ ಕುರಿತು ಬಾಗಲಕೋಟೆಯ ಜಿಲ್ಲಾಡಳಿತ ಹಾಗೂ ಜಿಲ್ಲಾ ಎಸ್ಪಿ ಅವರಿಂದ ಮಾಹಿತಿಯನ್ನು ಪಡೆದುಕೊಂಡಿದ್ದೇನೆ. ಹೀಗಾಗಿ ಉಡುಪಿ ಜಿಲ್ಲೆಯ ಜನರು ಯಾವುದೇ ಕಾರಣಕ್ಕೂ ಆತಂಕಕ್ಕೆ ಒಳಗಾಗುವುದು ಬೇಡಾ ಎಂದು ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ.

Leave A Reply

Your email address will not be published.