ಭಾನುವಾರ, ಏಪ್ರಿಲ್ 27, 2025
HomeBreakingಯುಕೆ ವೈರಸ್ ಭೀತಿ : ರಾಜ್ಯದಲ್ಲಿಯೂ ಜಾರಿಯಾಗುತ್ತಾ ಲಾಕ್ ಡೌನ್, ಸೀಲ್ ಡೌನ್ : ಕುತೂಹಲ...

ಯುಕೆ ವೈರಸ್ ಭೀತಿ : ರಾಜ್ಯದಲ್ಲಿಯೂ ಜಾರಿಯಾಗುತ್ತಾ ಲಾಕ್ ಡೌನ್, ಸೀಲ್ ಡೌನ್ : ಕುತೂಹಲ ಕೆರಳಿಸಿದೆ ಸಿಎಂ ಸುದ್ದಿಗೋಷ್ಠಿ

- Advertisement -

ಬೆಂಗಳೂರು : ಯು.ಕೆ ವೈರಸ್ ಸೋಂಕು ರಾಜ್ಯಕ್ಕೆ ಕಾಲಿಟ್ಟಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯದಲ್ಲಿ ಲಾಕ್ ಡೌನ್, ಸೀಲ್ ಡೌನ್ ಜಾರಿಗೊಳಿಸಲಾಗುತ್ತಿದೆ ಅನ್ನೋ ಮಾತುಗಳು ಕೇಳಿಬರುತ್ತಿದೆ. ಈ ನಡುವಲ್ಲೇ ಇಂದು ನಡೆಯಲಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸುದ್ದಿಗೋಷ್ಠಿ ಕುತೂಹಲವನ್ನು ಮೂಡಿಸಿದೆ.

ರಾಜ್ಯದಲ್ಲಿ ಈಗಾಗಲೇ ರಾಜ್ಯದಲ್ಲಿ 11 ಜನರಿಗೆ ಬ್ರಿಟನ್ ರೂಪಾಂತರ ವೈರಸ್ ದೃಢಪಟ್ಟಿದೆ. ಬೆಂಗಳೂರಿನಲ್ಲಿ 7, ಶಿವಮೊಗ್ಗ ಜಿಲ್ಲೆಯಲ್ಲಿ 4 ಮಂದಿ ಸೇರಿದಂತೆ ರಾಜ್ಯದಲ್ಲಿ ಒಟ್ಟು 11 ಜನರಿಗೆ ಬ್ರಿಟನ್ ರೂಪಾಂತರಿ ವೈರಸ್ ಶಾಕ್ ನೀಡಿದೆ. ಹೀಗಾಗಿ ಬಿಬಿಎಂಪಿ ವಸಂತಪುರ ಹಾಗೂ ಅಪಾರ್ಟ್ಮೆಂಟ್ ಸುತ್ತಲೂ ಹೈ ಅಲರ್ಟ್ ಘೋಷಿಸಿದೆ.

ಇನ್ನೊಂದೆಡೆ ಮಲೆನಾಡು ಶಿವಮೊಗ್ಗ ಜಿಲ್ಲೆಗೂ ಕೊರೊನಾ ಸೋಂಕು ಭರ್ಜರಿ ಶಾಕ್ ಕೊಟ್ಟಿದೆ. ಒಂದೇ ಕುಟುಂಬದ 4 ಮಂದಿಗೆ ಬ್ರಿಟನ್ ರೂಪಾಂತರಿ ಕೊರೊನಾ ಸೋಂಕು ಪತ್ತೆಯಾಗಿದೆ ಹೀಗಾಗಿ ಶಿವಮೊಗ್ಗ ಜಿಲ್ಲಾಡಳಿತ ಕೂಡ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ.

ಬ್ರಿಟನ್ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಕೈಗೊಳ್ಳಲಿರುವಂತ ಕ್ರಮಗಳ ಕುರಿತಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಇಂದು ಮಹತ್ವದ ಮಾಹಿತಿ ನೀಡಲಿದ್ದಾರೆ. ಅಲ್ಲದೇ ರೂಪಾಂತರ ವೈರಸ್ ಸೋಂಕಿನ ಭೀತಿಯ ಹಿನ್ನಲೆಯಲ್ಲಿ ಮತ್ತೆ ರಾಜ್ಯದಲ್ಲಿ ಲಾಕ್ ಡೌನ್, ಸೀಲ್ ಡೌನ್ ನಂತಹ ಟಫ್ ರೂಲ್ಸ್ ಜಾರಿಗೆ ತರಲಿದ್ದಾರಾ ಎಂಬ ಕುತೂಹಲಕ್ಕೂ ಕಾರಣವಾಗಿದೆ.

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಬ್ರಿಟನ್ ವೈರಸ್ ನಿಯಂತ್ರಣ ಸಂಬಂಧ ಕೈಗೊಳ್ಳಲಿರುವಂತ ಕ್ರಮಗಳ ಕುರಿತಂತೆ ಸುದ್ದಿಗೋಷ್ಠಿ ನಡೆಸಿ, ಮಹತ್ವದ ಮಾಹಿತಿ ನೀಡಲಿದ್ದಾರೆ.ಈ ಮೂಲಕ ಬ್ರಿಟನ್ ವೈರಸ್ ಸೋಂಕು ರಾಜ್ಯಕ್ಕೆ ವ್ಯಾಪಿಸುತ್ತಿದ್ದಂತೆಯೇ ಜನರು ಆತಂಕಗೊಂಡಿದ್ದಾರೆ. ಹೀಗಾಗಿ ಮುಖ್ಯಮಂತ್ರಿ ಅವರ ಸುದ್ದಿಗೋಷ್ಠಿ ಹೆಚ್ಚು ಮಹತ್ವವನ್ನು ಪಡೆದುಕೊಂಡಿದೆ.

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular