ವಿಜಯಪುರ : ಸಿಗರೇಟ್ ಸೇದಿ ಹೊಗೆ ಬಿಡುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಗಲಾಟೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿಯಲ್ಲಿ ನಡೆದಿದೆ.
ದೇವರಹಿಪ್ಪರಗಿಯ ಡಾಬಾವೊಂದರಲ್ಲಿ ಇಬ್ಬರು ಸಿಗರೇಟ್ ಸೇದುತ್ತಿದ್ರು. ಇದೇ ವಿಚಾರದಲ್ಲಿ ನಾಲ್ವರ ನಡುವೆ ಗಲಾಟೆ ನಡೆದಿದೆ. ಈ ವೇಳೆಯಲ್ಲಿ ಸಿಗರೇಟ್ ಸೇದಿ ಹೊಗೆ ಬಿಡುತ್ತಿರುವುದನ್ನು ಪ್ರಶ್ನಿಸಿದ ಯುವಕರಿಬ್ಬರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಲಾಗಿದೆ. ಘಟನೆಯಲ್ಲಿ ದಿಲೀಪ್ ಚೆವ್ಹಾಣ್ (28 ವರ್ಷ), ಮಹಾಂತೇಶ್ ಚೌವ್ಹಾಣ್ (26 ವರ್ಷ) ಎಂಬವರು ಗಂಭೀರವಾಗಿ ಹಲ್ಲೆಗೊಳಗಾಗಿದ್ದಾರೆ.
ಸತೀಶ್ ಬೂದಿಹಾಳ ಮತ್ತು ಈಶ್ವರ ಸವದಿ ಎಂಬವರೇ ಹಲ್ಲೆ ನಡೆಸಿದ್ದು, ಘಟನೆಯ ಕುರಿತು ಹಲ್ಲೆಗೊಳಗಾದವರು ಪೊಲೀಸರಿಗೆ ದೂರು ನೀಡಲು ತೆರಳಿದ ವೇಳೆಯಲ್ಲಿ ಸ್ಥಳೀಯ ಬಿಜೆಪಿ ಮುಖಂಡ ರೊಬ್ಬರು ರಾಜಿ ಪಂಚಾಯಿತಿ ಮಾಡುವುದಾಗಿ ಪುಸಲಾಯಿಸಿ ಠಾಣೆಯಿಂದ ಇಬ್ಬರನ್ನೂ ಕರೆದೊಯ್ದು ನಂತರದಲ್ಲಿ ಹಲ್ಲೆ ನಡೆಸಿದ್ದಾರೆಂದ ಆರೋಪ ಕೇಳಿಬಂದಿದೆ.
ಹಲ್ಲೆಗೊಳಗಾದವರನ್ನು ವಿಜಯಪುರ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಯನ್ನು ಕೊಡಿಸಲಾಗುತ್ತಿದೆ. ಅಲ್ದಲೇ ಯುವಕರ ಮೇಲೆ ಹಲ್ಲೆ ನಡೆದಿರುವ ಘಟನೆ ಜಿಲ್ಲಾಸ್ಪತ್ರೆ ಬಳಿಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಪ್ರಕರಣದ ಕುರಿತು ದೇವರ ಹಿಪ್ಪರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.
.