ಮದುವೆ ದಿಬ್ಬಣದ ಬಸ್ ಪಲ್ಟಿ : 5 ಮಂದಿ ಸ್ಥಳದಲ್ಲಿಯೇ ಸಾವು, 30ಕ್ಕೂ ಅಧಿಕ ಮಂದಿ ಗಂಭೀರ

ಮಂಗಳೂರು : ಮದುವೆಯ ದಿಬ್ಬಣ ಬಸ್ ಪಲ್ಟಿಯಾಗಿ ಐದು ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿ, ಹಲವರು ಗಾಯಗೊಂಡಿರುವ ಘಟನೆ ಕೇರಳದ ಪಾನತ್ತೂರು ಬಳಿ ನಡೆದಿದೆ.

ಪುತ್ತೂರಿನಿಂದ ಮಡಿಕೇರಿ ಕರಿಕೆಯಲ್ಲಿ ನಡೆಯುತ್ತಿದ್ದ ಮದುವೆಗೆ ತೆರಳುತ್ತಿದ್ದ ಬಸ್ ಪಾನತ್ತೂರಿ ಬಳಿಯ ಗಡಿಗುಡ್ಡೆಯ ಪೆರಿಯಾರಂ ಎಂಬಲ್ಲಿ ಪಲ್ಟಿಯಾಗಿದೆ. ಬಸ್ಸಿನಲ್ಲಿ ಒಟ್ಟು 60 ಮಂದಿ ಪ್ರಯಾಣಿಸುತ್ತಿದ್ದು, 30ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎನ್ನಲಾಗು ತ್ತಿದೆ.

ಅಲ್ಲದೇ ಮದುವೆ ದಿಬ್ಬಣದ ಬಸ್ ನಲ್ಲಿದ್ದ ಮಗು ಸೇರಿದಂತೆ 5 ಮಂದಿ ಸ್ಥಲದಲ್ಲಿಯೇ ಸಾವನ್ನಪ್ಪಿದ್ದಾರೆ. ಸಾವಿನ ಕುರಿತು ನಿಖರವಾದ ಮಾಹಿತಿ ಲಭ್ಯವಾಗಿಲ್ಲ. ಗಾಯಾಳುಗಳನ್ನು ಕಾಂಞಗಾಂಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಯನ್ನು ಕೊಡಿಸಲಾಗುತ್ತಿದೆ.

Comments are closed.