ಕೊರೊನಾ ಸೋಂಕಿನಿಂದ ಸಿಎಂ ಯಡಿಯೂರಪ್ಪ ಗುಣಮುಖ : ಮಣಿಪಾಲ ಆಸ್ಪತ್ರೆಯಿಂದ ಬಿಡುಗಡೆ

0

ಬೆಂಗಳೂರು : ಕೊರೊನಾ ಸೋಂಕಿಗೆ ತುತ್ತಾಗಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇದೀಗ ‌ಸಂಪೂರ್ಣವಾಗಿ ಗುಣಮುಂರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಮಣಿಪಾಲ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಸಿಎಂ ಯಡಿಯೂರಪ್ಪ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಅವರು ಮಣಿಪಾಲ ಆಸ್ಪತ್ರೆ ಕಳೆದೊಂದು ವಾರದಿಂದಲೂ ಚಿಕಿತ್ಸೆಯನ್ನು ಪಡೆದುಕೊಳ್ಳುತ್ತಿದ್ದರು. ನಿನ್ನೆ ನಡೆಸಿದ ಕೊರೊನಾ ತಪಾಸಣಾ ವರದಿಯಲ್ಲಿ ನೆಗೆಟಿವ್ ಬಂದಿತ್ತು. ಈ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

ತಮಗೆ ಚಿಕಿತ್ಸೆಯನ್ನು ನೀಡಿದ ವೈದ್ಯರು, ಶುಶ್ರೂಷಕರು ಹಾಗೂ ಆಸ್ಪತ್ರೆಯ ಸಿಬ್ಬಂದಿಗಳಿಗೆ ಧನ್ಯವಾದ ಸಲ್ಲಿಸಿದ್ದಾರೆ. ತಮ್ಮ ಚೇತರಿಕೆಗೆ ಹಾರೈಸಿದ ಸಮಸ್ತ ನಾಗರಿಕರಿಗೆ ಕೃತಜ್ಞತೆಯನ್ನು ಸಲ್ಲಿಸಿದ್ದಾರೆ.

Leave A Reply

Your email address will not be published.