ತೋಟದ ಕೆಲಸದ ವೇಳೆಯಲ್ಲಿ ಗುಡ್ಡ ಕುಸಿತ : 4 ಕಾರ್ಮಿಕರ ದುಂತರ ಸಾವು

ಯಲ್ಲಾಪುರ : ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆಯಲ್ಲಿ ಮಣ್ಣು ಕುಸಿದು ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಇಡಗುಂದಿಯಲ್ಲಿ ನಡೆದಿದೆ.

ಯಲ್ಲಾಪುರ ತಾಲೂಕಿನ ಕಿರವತ್ತಿ ನಿವಾಸಿ ಗೌಳಿವಾಡದ ಭಾಗ್ಯ ಲಕ್ಷ್ಮಿ ( 38 ವರ್ಷ), ಸಂತೋಷ್ ಡೋಯಿಪಡೆ ( 18 ವರ್ಷ) ಹಾಗೂ ಮಾಲು ಡೋಯಿಪಡೆ ( 21 ವರ್ಷ), ಭಾಗ್ಯಶ್ರೀ ಎಡಗೆ (21 ವರ್ಷ) ಮೃತ ದುರ್ದೈವಿಗಳು. ಘಟನೆಯಲ್ಲಿ ಮೂವರಿಗೆ ಗಾಯವಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ತೋಟದ ಮಾಲೀಕ ಮಂಜುನಾಥ ನಾಗಪ್ಪ ಭಟ್ ಸೇರಿದಂತೆ 7 ಮಂದಿ ತೋಟದಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆಯಲ್ಲಿ ಒಮ್ಮಿಂದೊಮ್ಮೆಲೆ ಗುಡ್ಡ ಕುಸಿತವಾಗಿದೆ. ಕೆಲಸ ಮಾಡುತ್ತಿದ್ದ ನಾಲ್ವರು ಮಣ್ಣಿನಡಿಯಲ್ಲಿ ಸಿಲುಕಿ ಸಾವನ್ನಪ್ಪಿದ್ದಾರೆ. ತೋಟದ ಮಾಲೀಕ ಸೇರಿದಂತೆ ಮೂವರು ಗಾಯಗೊಂಡಿದ್ದಾರೆ.

ಇನ್ನು ಮಣ್ಣಿನಡಿಯಲ್ಲಿ ಸಿಲುಕಿರುವವರ ಮೃತ ದೇಹಗಳನ್ನು ಹೊರ ತೆಗೆಯಲಾಗಿದ್ದು, ಮರಣೋತ್ತರ ಕಾರ್ಯವನ್ನು ನಡೆಸಲಾಗಿದೆ. ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Comments are closed.