ಭಾನುವಾರ, ಏಪ್ರಿಲ್ 27, 2025
HomeBreakingಮಾಜಿ ಸಚಿವ, ಹಿರಿಯ ರಾಜಕಾರಣಿ ಅಮರನಾಥ ಶೆಟ್ಟಿ ವಿಧಿವಶ

ಮಾಜಿ ಸಚಿವ, ಹಿರಿಯ ರಾಜಕಾರಣಿ ಅಮರನಾಥ ಶೆಟ್ಟಿ ವಿಧಿವಶ

- Advertisement -

ಮಂಗಳೂರು : ಮಾಜಿ ಸಚಿವ, ಜಾತ್ಯಾತೀತ ಜನತಾದಳದ ಮುಖಂಡ, ಹಿರಿಯ ರಾಜಕಾರಣಿ ಕೆ.ಅಮರನಾಥ ಶೆಟ್ಟಿ ವಿಧಿವಶರಾಗಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಅವರನ್ನು ಮಂಗಳೂರಿನ ಎ.ಜೆ.ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸೋಮವಾರ ನಿಧನರಾಗಿದ್ದಾರೆ.
ಮೂಡಬಿದಿರೆ ವಿಧಾನಸಭಾ ಕ್ಷೇತ್ರದಿಂದ 1983, 1987, 1994 ರಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದರು. ಮೂರು ಬಾರಿ ಶಾಸಕರಾಗಿ ಪ್ರವಾಸೋದ್ಯಮ ಮತ್ತು ಮುಜರಾಯಿ ಸಚಿವರಾಗಿಯೂ ಸೇವೆ ಸಲ್ಲಿಸಿದ್ದಾರೆ. 1965ರಲ್ಲಿ ರಾಜಕೀಯ ಪ್ರವೇಶ ಮಾಡಿದ್ದ ಅಮರನಾಥ ಶೆಟ್ಟಿ ಅವರು, ಕಾರ್ಕಳ ತಾಲೂಕಿನ ಪಾಲಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ, ಮೂಡಬಿದಿರೆ ಪುರಸಭೆಯ ಅಧ್ಯಕ್ಷರಾಗಿ, ಕಾರ್ಕಳ ತಾಲೂಕು ಮಾರುಕಟ್ಟೆ ಸೊಸೈಟಿ ಅಧ್ಯಕ್ಷರಾಗಿ, ಸಹಕಾರಿ ಸೇವಾ ಬ್ಯಾಂಕಿನ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು.

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular