ಕರ್ನಾಟಕದ ಬರಪೀಡಿತ ಪ್ರದೇಶಗಳಿಗೆ 5300 ಕೋಟಿ ಆರ್ಥಿಕ ನೆರವು

ಬೆಂಗಳೂರು : ಕಳೆದ ಮೂರ್ನಾಲ್ಕು ವರ್ಷಗಳಿಂದಲೂ ಕರ್ನಾಟಕದ ಹಲವು ಜಿಲ್ಲೆಗಳು ಭೀಕರ ಬರಗಾಲದಿಂದ ತತ್ತರಿಸಿ (Infrastructure development Budget 2023) ಹೋಗಿವೆ. ಇದೀಗ ಕೇಂದ್ರ ಸರಕಾರದ ಬಜೆಟ್ ನಲ್ಲಿ ಕರ್ನಾಟಕದ ಬರಗಾಲ ಪೀಡಿತ ಪ್ರದೇಶಗಳಿಗೆ ಬರೋಬ್ಬರಿ 5,300 ಕೋಟಿ ರೂಪಾಯಿ ನೆರವು ಘೋಷಣೆ ಮಾಡಿದೆ. ಇದರಿಂದಾಗಿ ಬರಗಾಲ ಪೀಡಿತ ಪ್ರದೇಶಗಳ ಜನರಿಗೆ ನರವು ಜೊತೆಗೆ ಮೂಲಸೌಕರ್ಯ ಅಭಿವೃದ್ದಿ ಸಾಧ್ಯವಾಗಲಿದೆ.

ಕರ್ನಾಟಕದ ಹಾಸನ, ಕೋಲಾರ, ದಾವಣಗೆರೆ, ಬೆಳಗಾವಿ, ಬಾಗಲಕೋಟೆ, ಬೆಂಗಳೂರು ಗ್ರಾಮಾಂತರ, ಕಲಬುರಗಿ, ಯಾದಗಿರಿ, ಬೀದರ್, ಹಾವೇರಿ, ಧಾರವಾಡ, ಮಂಡ್ಯ, ಬಳ್ಳಾರಿ, ಗದಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿನ ಹಲವು ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಣೆ ಮಾಡಲಾಗಿತ್ತು. ಇದೀಗ ಕೇಂದ್ರದ ಬಜೆಟ್ ನಲ್ಲಿ ನೆರವು ಘೋಷಣೆ ಮಾಡಿರುವುದು ಬರಪೀಡಿತ ಪ್ರದೇಶಗಳಲ್ಲಿನ ಜನರಿಗೆ ಆರ್ಥಿಕ ನೆರವು, ಬರ ಪರಿಹಾರ,

ಕಳೆದ ಎರಡು ದಶಕಗಳಲ್ಲಿ ಬರೋಬ್ಬರಿ 15 ಕ್ಕೂ ಅಧಿಕ ವರ್ಷಗಳ ಕಾಲ ಕರ್ನಾಟಕ ಬರಗಾಲವನ್ನು ಅನುಭವಿಸಿದೆ. ಇದರಿಂದಾಗಿ ಅಂತರ್ಜಲದ ಮಟ್ಟವು ಗಣನೀಯ ಮಟ್ಟದಲ್ಲಿ ಇಳಿಕೆಯಾಗುತ್ತಿದೆ. ಬರಗಾಲ ಪೀಡಿತ ಪ್ರದೇಶಗಳಿಗೆ ಅಗತ್ಯ ನೆರವು ನೀಡುವಂತೆ ರಾಜ್ಯ ಸರಕಾರ ಈ ಹಿಂದೆಯೇ ಕೇಂದ್ರ ಸರಕಾರಕ್ಕೆ ಮನವಿ ಮಾಡಿತ್ತು. ಈ ಹಿನ್ನೆಲೆಯಲ್ಲೀಗ ಇದೀಗ ನೆರವು ಘೋಷಣೆ ಮಾಡಲಾಗಿದೆ.

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2024 ರ ಲೋಕಸಭೆ ಚುನಾವಣೆಯ ಮೊದಲು ಮೋದಿ ಸರಕಾರದ ಕೊನೆಯ ಪೂರ್ಣ ಪ್ರಮಾಣದ ಕೇಂದ್ರ ಬಜೆಟ್ ಮಂಡನೆ ಮಾಡಿದ್ದಾರೆ. ಬಜೆಟ್ ನಲ್ಲಿ ಮೀನುಗಾರರಿಗೆ, ಮೂಲಸೌಕರ್ಯ, ರಕ್ಷಣೆ ಮತ್ತು ಲಾಜಿಸ್ಟಿಕ್ಸ್‌ಗೆ ಹಣವನ್ನು ಹೆಚ್ಚಿಸುವ ನಿರೀಕ್ಷೆಯಿದ್ದು, ಸಂಬಂಧಿತ ಕಂಪನಿಗಳಿಗೆ ವಿಂಡ್‌ಫಾಲ್‌ಗಳನ್ನು ಒದಗಿಸುತ್ತದೆ.

ಇನ್ನು ಕೃಷಿ ಕ್ರಮಗಳು ತಂತ್ರಜ್ಞಾನ ಮತ್ತು ಡಿಜಿಟಲ್ ಪ್ರಗತಿಯನ್ನು ಹತೋಟಿಗೆ ತರುತ್ತವೆ. ಪಶುಸಂಗೋಪನೆ, ಹೈನುಗಾರಿಕೆ ಮತ್ತು ಮೀನುಗಾರಿಕೆಗೆ ಒತ್ತು ನೀಡಿ ಕೃಷಿ ಸಾಲದ ಗುರಿಯನ್ನು 20 ಲಕ್ಷ ಕೋಟಿ ರೂ.ಗೆ ಹೆಚ್ಚಳ ಮಾಡಲಾಗುತ್ತಿದೆ. ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮಿಲೆಟ್ ರಿಸರ್ಚ್ ಅನ್ನು ಶ್ರೇಷ್ಠತೆಯ ಕೇಂದ್ರವಾಗಿ ಬೆಂಬಲಿಸಲಾಗುತ್ತದೆ. ಕೃಷಿಗಾಗಿ ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯವು ಅಂತರ್ಗತ ರೈತ-ಕೇಂದ್ರಿತ ಪರಿಹಾರಗಳನ್ನು ಸಕ್ರಿಯಗೊಳಿಸುತ್ತದೆ.

ಇದನ್ನೂ ಓದಿ : Union Budget 2023 Updates : ಬಜೆಟ್ ಮಂಡನೆಗೆ ಮುನ್ನ ಏರಿಕೆ ಕಂಡ ನಿಫ್ಟಿ, ಸೆನ್ಸೆಕ್ಸ್

ಇದನ್ನೂ ಓದಿ : ಮೀನುಗಾರರಿಗೆ ಗುಡ್‌ ನ್ಯೂಸ್‌ : ಮೀನುಗಾರಿಕೆ ಅಭಿವೃದ್ದಿಗೆ 6 ಸಾವಿರ ಕೋಟಿ ರೂ. ಘೋಷಣೆ

ಕೃಷಿ ಒಳಹರಿವು, ಮಾರುಕಟ್ಟೆ ಇಂಟೆಲ್, ಕೃಷಿ ಉದ್ಯಮಕ್ಕೆ ಬೆಂಬಲ, ಸ್ಟಾರ್ಟ್‌ಅಪ್‌ಗಳಿಗೆ ಸುಧಾರಿತ ಪ್ರವೇಶಕ್ಕೆ ಸಹಾಯ ಮಾಡುತ್ತದೆ. ಕೃಷಿ ವೇಗವರ್ಧಕ ನಿಧಿಯನ್ನು ಗ್ರಾಮೀಣ ಪ್ರದೇಶದ ಯುವ ಉದ್ಯಮಿಗಳಿಂದ ಕೃಷಿ ಸ್ಟಾರ್ಟಪ್‌ಗಳನ್ನು ಉತ್ತೇಜಿಸಲು ಸ್ಥಾಪಿಸಲಾಗುವುದು, ರೈತರ ಸವಾಲುಗಳಿಗೆ ನವೀನ ಮತ್ತು ಕೈಗೆಟುಕುವ ಪರಿಹಾರಗಳನ್ನು ತರುತ್ತದೆ, ಲಾಭದಾಯಕತೆಯನ್ನು ಹೆಚ್ಚಿಸುತ್ತದೆ ಮತ್ತು ಆಧುನಿಕ ತಂತ್ರಜ್ಞಾನವನ್ನು ತರುತ್ತದೆ ಎಂದು ತಿಳಿಸಿದ್ದಾರೆ.

Infrastructure development Budget 2023 : 5300 crore financial assistance to the drought affected areas of Karnataka

Comments are closed.