ಸಿದ್ದರಾಮಯ್ಯ ಬಜೆಟ್‌ ಬೃಹತ್‌ ಶೂನ್ಯ : ಬಿಜೆಪಿ ಹಿರಿಯ ಶಾಸಕ ಸುನಿಲ್‌ ಕುಮಾರ್‌

ಸಿದ್ದರಾಮಯ್ಯ ಈ ಬಜೆಟ್ ಮೂಲಕ ಹೊರಿಸಿದ್ದಾರೆ. ಬರೋಬ್ಬರಿ 1,32,000 ಕೋಟಿ ರೂ.ಸಾಲ ಮಾಡಲಾಗಿದ್ದು, ರಾಜ್ಯದ ಒಟ್ಟು ಹೊಣೆಗಾರಿಕೆ 8,24,389 ಕೋಟಿ ರೂ.ಗೆ ಏರಿಕೆಯಾಗಿರುವುದು ಕಳವಳದ ಸಂಗತಿಯಾಗಿದ್ದು, ಬಂಡವಾಳ ವೆಚ್ಚವನ್ನು 74,682 ಕೋಟಿ ರೂ.ಗೆ ಇಳಿಕೆ ಮಾಡಲಾಗಿದೆ.

ಬೆಂಗಳೂರು : Siddaramaiahs budget : ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ ರಾಜ್ಯ ಬಜೆಟ್‌ಗೆ ಕಾರ್ಕಳ ಶಾಸಕರಾದ ವಿ.ಸುನಿಲ್‌ ಕುಮಾರ್‌ ಪ್ರತಿಕ್ರಿಯಿಸಿದ್ದು, ರಾಜ್ಯ ಬಜೆಟ್ ನ ಒಟ್ಟಾರೆ ಹೂರಣ ” ಬೃಹತ್ ಶೂನ್ಯ”. ಎಂದಿದ್ದಾರೆ.

ಹೊಸ ಹೊಸ ಪದಪುಂಜಗಳನ್ನು ಹೊಸೆಯುವುದಕ್ಕೆ ಸಿದ್ದರಾಮಯ್ಯನವರು ನೀಡಿದ ಆದ್ಯತೆಯನ್ನು ಹೊಸ ಹೊಸ ಯೋಜನೆಗಳ ಸೃಷ್ಟಿಗೆ ನೀಡದೇ ಇರುವುದು ರಾಜ್ಯದ ದೌರ್ಭಾಗ್ಯ. ಈ ಬಾರಿಯ ಬಜೆಟ್ ನ್ನು “11 G” ಮಾದರಿಯಲ್ಲಿ ರೂಪಿಸಲಾಗಿದೆ ಎಂದು ಸಿದ್ದರಾಮಯ್ಯನವರು ಬಜೆಟ್ ನ ಪೂರ್ವಪೀಠಿಕೆಯಲ್ಲಿ ಹೆಮ್ಮೆಯಿಂದ ಹೇಳಿದ್ದಾರೆ. ಆದರೆ ಇಲಾಖಾವಾರು ಬಜೆಟ್ ವಿಶ್ಲೇಷಣೆ ನಡೆಸಿದಾಗ ಇದು “11G” ಬಜೆಟ್ ಬದಲಾಗಿದೆ “11 ಲೈ ” ( ಹನ್ನೊಂದು ಸುಳ್ಳು ) ಗಳ ಬಜೆಟ್ ಎಂದು ವಿಶ್ಲೇಷಿಸಬಹುದಾಗಿದೆ ಎಂದಿದ್ದಾರೆ.

ರಾಜ್ಯದ ಇತಿಹಾಸದಲ್ಲಿ ಹಿಂದೆಂದೂ ಕಾಣದಂಥ ಸಾಲದ‌ ಹೊರೆಯನ್ನು ಸಿದ್ದರಾಮಯ್ಯ ಈ ಬಜೆಟ್ ಮೂಲಕ ಹೊರಿಸಿದ್ದಾರೆ. ಬರೋಬ್ಬರಿ 1,32,000 ಕೋಟಿ ರೂ.ಸಾಲ ಮಾಡಲಾಗಿದ್ದು, ರಾಜ್ಯದ ಒಟ್ಟು ಹೊಣೆಗಾರಿಕೆ 8,24,389 ಕೋಟಿ ರೂ.ಗೆ ಏರಿಕೆಯಾಗಿರುವುದು ಕಳವಳದ ಸಂಗತಿಯಾಗಿದ್ದು, ಬಂಡವಾಳ ವೆಚ್ಚವನ್ನು 74,682 ಕೋಟಿ ರೂ.ಗೆ ಇಳಿಕೆ ಮಾಡಲಾಗಿದೆ.

ಯಾವ ದೃಷ್ಠಿಯಿಂದ ನೋಡಿದರೂ ಇದು ವಿತ್ಥೀಯ ಶಿಸ್ತಿನ ಪರಿಮಿತಿಯೊಳಗಿರುವ ಆಯವ್ಯಯ ಎಂದು ಒಪ್ಪಿಕೊಳ್ಳುವುದಕ್ಕೆ ಅಸಾಧ್ಯವಾಗಿದ್ದು, ರಾಜ್ಯದ ದೂರಗಾಮಿ ಭವಿಷ್ಯದ ದೃಷ್ಟಿಯಿಂದ ಅವಲೋಕಿಸಿದರೆ ಸಿದ್ದರಾಮಯ್ಯನವರು ಕರ್ನಾಟಕವನ್ನು ತೀವ್ರತರವಾದ ಸಾಲದ ಮಡುವಿನಲ್ಲಿ ನೂಕುವ ರಭಸದಲ್ಲಿ ಇದ್ದಾರೆ.

Also Read: ಕರ್ನಾಟಕ ಬಜೆಟ್ 2026: ಅನ್ನಭಾಗ್ಯ’ಕ್ಕೆ ಹೊಸ ರೂಪ: ಇಂದಿರಾ ಆಹಾರ ಕಿಟ್ ‘ಇಂದಿರಾ ಆಹಾರ ಕಿಟ್’ ಮತ್ತು 50 ಹೊಸ ಹಾಸ್ಟೆಲ್‌ಗಳ ಘೋಷಣೆ

ಕರಾವಳಿ ಅಭಿವೃದ್ದಿ ಸಂಪೂರ್ಣ ಶೂನ್ಯ

ಬಜೆಟ್ ನ ಪ್ರತಿಪುಟವನ್ನು ಹುಡುಕಿದರೂ ಕರಾವಳಿ ಭಾಗದ ಅಭಿವೃದ್ಧಿಗೆ ಪೂರಕವಾದ ಒಂದೇ ಒಂದು ಅಂಶಗಳು ಈ ಬಜೆಟ್ ನಲ್ಲಿ ಇಲ್ಲ. ಹೊಸ ವೈದ್ಯ ಕಾಲೇಜು ಬೇಡಿಕೆ ಈಡೇರಿಲ್ಲ.‌ಪಶ್ಚಿಮ ವಾಹಿನಿ ಯೋಜನೆಗಳಿಗೆ ಬಿಡಿಕಾಸು ಕೊಟ್ಟಿಲ್ಲ. ನಗರಾಭಿವೃದ್ಧಿ ಯೋಜನೆಗಳು ಬೆಂಗಳೂರು ಬಿಟ್ಟು ಆಚೆ ಬರದೇ ಇರುವುದು ಈ ಸರ್ಕಾರದ ಬಿಯಾಂಡ್ ಬೆಂಗಳೂರು ಯೋಜನೆಯ ಬದ್ಧತೆಯನ್ನು ಪ್ರದರ್ಶಿಸುತ್ತದೆ ಎಂದಿದ್ದಾರೆ.

ಕರಾವಳಿಯ ಸಮಗ್ರ ಅಭಿವೃದ್ಧಿ ಪ್ರತ್ಯೇಕ ಕೈಗಾರಿಕಾ ಕ್ಲಸ್ಟರ್, ಪ್ರವಾಸೋದ್ಯಮದ ಬಗ್ಗೆ ಸ್ಪಷ್ಟತೆ, ಐಟಿ ಹೂಡಿಕೆ ಇತ್ಯಾದಿ ವಿಚಾರಗಳನ್ನು ನಾವು ನಿರೀಕ್ಷೆ ಮಾಡಿದ್ದೆವು. ಹೀಗಾಗಿ ಇದು ಕರಾವಳಿ ವಿರೋಧಿ ಬಜೆಟ್ ಕೂಡಾ ಹೌದು. ಒಟ್ಟಾರೆಯಾಗಿ ಸಿದ್ದರಾಮಯ್ಯನವರ ಈ ಬಾರಿಯ ಬಜೆಟ್ ಅಪ್ರೋಚ್ playing to the gallery ಎಂದು ಒಂದೇ ವಾಕ್ಯದಲ್ಲಿ ಬರೆಯಬಹುದು ಎಂದಿದ್ದಾರೆ.

Meghana Pranuth | ಮೇಘನಾ ಪ್ರಣೂತ್‌

ಮೇಘನಾ ಪ್ರಣೂತ್‌ ಮೂಲತಃ ಉಡುಪಿ ಜಿಲ್ಲೆಯವರು. ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣವನ್ನು ಪಡೆದಿದ್ದು, ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಸಿನಿಮಾ, ಕ್ರೀಡೆ, ವಾಣಿಜ್ಯ, ಫ್ಯಾಷನ್‌ ಕ್ಷೇತ್ರದಲ್ಲಿ ಆಸಕ್ತಿ ಹೊಂದಿದ್ದಾರೆ. ಇದೀಗ ನ್ಯೂಸ್‌ ನೆಕ್ಸ್ಟ್‌ನಲ್ಲಿ ನಿರೂಪಕರಾಗಿ, ಕಂಟೆಂಟ್‌ ಕ್ರಿಯೆಟರ್‌ ಆಗಿ ಕೆಲಸ ಮಾಡುತ್ತಿದ್ದಾರೆ.

Related Stories