7th pay commission : ಬೆಂಗಳೂರು : ಕರ್ನಾಟಕ ರಾಜ್ಯದ ಸರಕಾರಿ ನೌಕರರ ಬೇಡಿಕೆಯಾಗಿರುವ 7ನೇ ವೇತನ ಆಯೋಗದ ಶಿಫಾರಸ್ಸು ಜಾರಿಗೆ ರಾಜ್ಯ ಸರಕಾರ ಕೊನೆಗೂ ಸಮ್ಮತಿ ಸೂಚಿಸಿದೆ. ಅಗಸ್ಟ್ 1ರಿಂದಲೇ 7ನೇ ವೇತನ ಆಯೋಗದ ಶಿಫಾರಸ್ಸುಗಳು ಜಾರಿಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರ

ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆದಿದ್ದು, ಸಭೆಯಲ್ಲಿ ವೇತನ ಆಯೋಗದ ಶಿಫಾರಸ್ಸು ಜಾರಿಗೆ ಸಂಬಂಧಿಸಿದಂತೆ ಚರ್ಚೆ ನಡೆಸಲಾಗಿದೆ. ಕೊನೆಗೂ ಸಚಿವ ಸಂಪುಟ ವೇತನ ಆಯೋಗದ ವರದಿ ಜಾರಿಗೆ ಅಸ್ತು ಎಂದಿದೆ. ಈ ಮೂಲಕ ೭ನೇ ವೇತನ ಆಯೋಗದ ವರದಿ ಯಥಾವತ್ತಾಗಿ ಜಾರಿಗೆ ಬರಲಿದೆ.
ಕೆ.ಸುಧಾಕರ್ ರಾವ್ ಅವರ ನೇತೃತ್ವದ 7ನೇ ವೇತನ ಆಯೋಗದ ವರದಿಯನ್ನು ರಾಜ್ಯ ಸರಕಾ ಮಾರ್ಚ್ 16 ರಂದು ಸ್ವೀಕಾರ ಮಾಡಿತ್ತು. ವೇತನ ಆಯೋಗದ ಶಿಫಾರಸ್ಸು ಜಾರಿಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರು ಹಣಕಾಸು ಇಲಾಖೆಯ ವರದಿಯನ್ನು ಕೇಳಿದ್ದರು. ಇದೀಗ ಹಣಕಾಸು ಇಲಾಖೆಯ ವರದಿಯ ಬೆನ್ನಲ್ಲೇ ಸಿದ್ದರಾಮಯ್ಯ ಅವರು ಇಂದಿನ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಚರ್ಚಿಸಿ ಅಂತಿಮ ತೀರ್ಮಾನ ಕೈಗೊಂಡಿದ್ದಾರೆ.
ಇದನ್ನೂ ಓದಿ : 7ನೇ ವೇತನ ಹೆಚ್ಚಳ ಯಾವಾಗ ಜಾರಿ ? ಯಾರಿಗೆ ಎಷ್ಟು ಹೆಚ್ಚಳ ? ಇಲ್ಲಿದೆ ಸಂಪೂರ್ಣ ಮಾಹಿತಿ
ರಾಜ್ಯದಲ್ಲಿ ವೇತನ ಆಯೋಗದ ಶಿಫಾರಸ್ಸಿನಂತೆ ಸರಕಾರಿ ನೌಕರರ ವೇತನದಲ್ಲಿ ಶೇ.27 ರಷ್ಟು ಹೆಚ್ಚಳವಾಗಲಿದೆ. ರಾಜ್ಯ ಸರಕಾರ ಈಗಾಗಲೇ ಮಧ್ಯಂತರ ಪರಿಹಾರವನ್ನು ಘೋಷಣೆ ಮಾಡಿದ್ದು, ಉಳಿದ ವೇತನ ಏರಿಕೆ ಜಾರಿಗೆ ಬರಬೇಕಾಗಿದೆ. ಈ ನಡುವಲ್ಲೇ ರಾಜ್ಯ ಸರಕಾ ವೇತನ ಆಯೋಗದ ವರದಿ ಜಾರಿಗೆ ತರಲು ವಿಳಂಭ ಮಾಡಿದ ಹಿನ್ನೆಲೆಯಲ್ಲಿ ಸರಕಾರಿ ನೌಕರರು ಹೋರಾಟದ ಎಚ್ಚರಿಕೆ ನೀಡಿದ್ದರು.

ಇದನ್ನೂ ಓದಿ : Gruha Lakshmi Yojana : ಗೃಹಲಕ್ಷ್ಮೀ ಯೋಜನೆ ಹಣ ಜಮೆ ಆಗಿಲ್ವಾ : ಚಿಂತೆ ಬಿಡಿ ಎನ್ಪಿಸಿಐ ಚೆಕ್ ಮಾಡಿ
ಇದರ ಬೆನ್ನಲ್ಲೇ ಕರ್ನಾಟಕ ಸರಕಾರ ಕೊನೆಗೂ ಸರಕಾರಿ ನೌಕರರ ಬಹುದಿನದ ಬೇಡಿಕೆ ಈಡೇರಿಕೆಗೆ ಮುಂದಾಗಿದೆ. ಅಗಸ್ಟ್ 1 ರಿಂದಲೇ ಸರಕಾರಿ ನೌಕರರ ವೇತನ ಏರಿಕೆಯಾಗಲಿದೆ. ವೇತನ ಆಯೋಗ ಜಾರಿಯಾಗಿ ಮೂರು ವರ್ಷಗಳೇ ಕಳೆದಿದ್ದರೂ ಕೂಡ ಸರಕಾರ ನಾನಾ ಕಾರಣಗಳಿಂದಾಗಿ ವೇತನ ಆಯೋಗದ ಅವಧಿಯನ್ನು ಎರಡು ಬಾರಿ ವಿಸ್ತರಣೆ ಮಾಡಿತ್ತು. ಕೊನೆಗೂ ಇದೀಗ ಸರಕಾರಿ ನೌಕರರ ವೇತನ ಹೆಚ್ಚಳದ ಬೇಡಿಕೆ ಈಡೇರಿಕೆ ಆಗುತ್ತಿದೆ.
ಇದನ್ನೂ ಓದಿ : ಮಹಿಳೆಯರಿಗೆ ಸಿಗಲಿದೆ 5000 ರೂ. ; ಹೊಸ ಯೋಜನೆ ಘೋಷಿಸಿದ ಪ್ರಧಾನ ನರೇಂದ್ರ ಮೋದಿ
7th pay commission Report Implement august 1st in Karnataka Announced CM Siddaramaiah News In Kannada