ಕೇಂದ್ರ ಸರ್ಕಾರದಿಂದ ‘ಅಗತ್ಯ ವಸ್ತುಗಳ ಕಾಯ್ದೆ’ ಜಾರಿ : ಕಾಳಸಂತೆಯಲ್ಲಿ ಸಿಲಿಂಡರ್​ ಮಾರುವವರೇ ಎಚ್ಚರ

ದೇಶದಲ್ಲಿ ಇಂಧನ ಅಭಾವ ತಡೆಗಟ್ಟಲು ಕೇಂದ್ರ ಸರ್ಕಾರ ಅಗತ್ಯ ವಸ್ತುಗಳ ಕಾಯ್ದೆ-1955 ಜಾರಿಗೆ ತಂದಿದೆ.

ಇಸ್ರೇಲ್​ ಹಾಗೂ ಇರಾನ್​ ನಡುವೆ ಯುದ್ಧದ ಭೀತಿ ಹೆಚ್ಚುತ್ತಲೇ ಇದೆ. ಇದು ಜಾಗತಿಕ ಇಂಧನ ಮಾರುಕಟ್ಟೆಯ ಮೇಲೆ ಗಂಭೀರ ಪರಿಣಾಮ ಬೀರಿದೆ. ಭಾರತದಲ್ಲಿ ಎಲ್​ಪಿಜಿ ಸಿಲಿಂಡರ್​ಗಳ ಅಭಾವ ಉಂಟಾಗುವ ಸಾಧ್ಯತೆಇರುವುದರಿಂದ ಕಾಳಸಂತೆಗಳಲ್ಲಿ ಸಿಲಿಂಡರ್​ ಮಾರಾಟ ತಡೆಗೆ ಕೇಂದ್ರ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ.

ಹೌದು..!ದೇಶದಲ್ಲಿ ಇಂಧನ ಅಭಾವ ತಡೆಗಟ್ಟಲು ಕೇಂದ್ರ ಸರ್ಕಾರ ಅಗತ್ಯ ವಸ್ತುಗಳ ಕಾಯ್ದೆ-1955 ಜಾರಿಗೆ ತಂದಿದೆ. ಯುದ್ಧದ ಸಂದರ್ಭವನ್ನು ಬಳಸಿಕೊಂಡು ಎಲ್‌ಪಿಜಿ ಸಿಲಿಂಡರ್‌ಗಳನ್ನು ಅಕ್ರಮವಾಗಿ ದಾಸ್ತಾನು ಮಾಡುವುದು ಅಥವಾ ಹೆಚ್ಚಿನ ಬೆಲೆಗೆ ಮಾರಾಟ ಮಾಡುವುದನ್ನು ತಡೆಯುವುದು ಈ ಕಾಯ್ದೆಯ ಪ್ರಮುಖ ಉದ್ದೇಶವಾಗಿದೆ. ಅಲ್ಲದೇ ಒಂದು ವೇಳೆ ಎಲ್​ಪಿಜಿ ಇಂಧನ ಪೂರೈಕೆಯಲ್ಲಿ ಅಭಾವ ಉಂಟಾದಲ್ಲಿ ಮಾರುಕಟ್ಟೆಯಲ್ಲಿ ಸಿಲಿಂಡರ್​ಗಳ ಬೆಲೆ ಏರಿಕೆ ಮಾಡದಂತೆ ಈ ಕಾಯ್ದೆಯು ಕಾಪಾಡುತ್ತದೆ.

ಇದನ್ನೂ ಓದಿ: ವೈದ್ಯಾಧಿಕಾರಿಗಳೊಂದಿಗಿನ ಸರ್ಕಾರದ ಸಂಧಾನ ಸಭೆ ಸಕ್ಸಸ್​ : ಅರ್ನಿದಿಷ್ಟಾವಧಿ ಮುಷ್ಕರ ವಾಪಸ್​

ಈ ಕಾಯ್ದೆ ಜಾರಿಯಾದ ಬಳಿಕ ಎಲ್ಪಿಜಿ ಸಿಲಿಂಡರ್​ಗಳ ಕೃತಕ ಅಭಾವ ಸೃಷ್ಠಿಸುವುದು ಅಪರಾಧಕ್ಕೆ ಸಮ. ಯಾರಾದರೂ ಪೂರೈಕೆಯಲ್ಲಿ ವ್ಯತ್ಯಯ ಉಂಟುಮಾಡಿದಲ್ಲಿ ಅಂತವರ ವಿರುದ್ಧ ಕಠಿಣ ಕ್ರಮ ಜಾರಿಯಾಗಲಿದೆ.

Kannada News Next Desk

Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021

Related Stories