ಆಸ್ತಿ ತೆರಿಗೆ ಪಾವತಿಸದಿದ್ದರೆ ಹರಾಜು ಗ್ಯಾರಂಟಿ: ತೆರಿಗೆಗಳ್ಳರಿಗೆ ಖಡಕ್ ಎಚ್ಚರಿಕೆ ನೀಡಿದ ಕರ್ನಾಟಕ ಸರ್ಕಾರ

Pay property tax or face auction | Bengaluru property tax | ಬೆಂಗಳೂರು: ನಗರದಲ್ಲಿ ವರ್ಷಗಳಿಂದ ಆಸ್ತಿ ತೆರಿಗೆ ಪಾವತಿಸದೆ ಪಾಲಿಕೆಗೆ ವಂಚಿಸುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ತೆರಿಗೆ ಬಾಕಿ ಉಳಿಸಿಕೊಂಡಿರುವ ವಾಣಿಜ್ಯ ಆಸ್ತಿಗಳನ್ನು ಹರಾಜು ಹಾಕುವ ಪ್ರಕ್ರಿಯೆ ನಡೆಯಲಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಜಿಬಿಎ (GBA) ಕಚೇರಿಯಲ್ಲಿ ನಡೆದ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತೆರಿಗೆ ಸಂಗ್ರಹದ ವಿಚಾರದಲ್ಲಿ ಯಾವುದೇ ಹಸ್ತಕ್ಷೇಪ ಮಾಡುವುದಿಲ್ಲ ಮತ್ತು ನಿಯಮ ಉಲ್ಲಂಘಿಸುವವರ ವಿರುದ್ಧ ಪಾಲಿಕೆ ಕಾನೂನು ಕ್ರಮ ಜರುಗಿಸಲಿದೆ ಎಂದು ಸ್ಪಷ್ಟಪಡಿಸಿದರು.

ಡಿಸಿಎಂ ನೀಡಿದ ಪ್ರಮುಖ ಮಾಹಿತಿಗಳು:

ಖಡಕ್ ಸೂಚನೆ: “ತೆರಿಗೆ ಪಾವತಿಸಲು ಓಟಿಎಸ್ ಮೂಲಕ ಅವಕಾಶ ನೀಡಲಾಗಿತ್ತು. ಆ ಸಂದರ್ಭವನ್ನು ಬಳಸಿಕೊಳ್ಳದಿದ್ದರೆ ಪಾಲಿಕೆ ಹರಾಜು ಪ್ರಕ್ರಿಯೆ ನಡೆಸುವುದರಲ್ಲಿ ತಪ್ಪಿಲ್ಲ. ಸರ್ಕಾರದ ಹಸ್ತಕ್ಷೇಪವಿಲ್ಲದೆ ಅಧಿಕಾರಿಗಳು ತಮ್ಮ ಕೆಲಸ ಮಾಡಲಿದ್ದಾರೆ,” ಎಂದು ಡಿಸಿಎಂ ಎಚ್ಚರಿಸಿದ್ದಾರೆ.

Exit mobile version