ಪ್ರೀತಿ, ಕಾಳಜಿ, ಬೆಂಬಲಕ್ಕೆ ಧನ್ಯವಾದವೆಂದ ನಟಿ ಮಾಲಾಶ್ರೀ

ಬೆಂಗಳೂರು : ಸ್ಯಾಂಡಲ್‌ವುಡ್ ಖ್ಯಾತ ನಿರ್ಮಾಪಕ ರಾಮು ಅವರು ಬಾರದ ಲೋಕಕ್ಕೆ ಪಯಣಿಸಿದ್ದಾರೆ. ಇದರ ಬೆನ್ನಲ್ಲೇ ರಾಮು ಅವರ ಪತ್ನಿ ಖ್ಯಾತ ನಟಿ ಮಾಲಾಶ್ರೀ ನಿಮ್ಮೆಲ್ಲರ ಪ್ರೀತಿ, ಕಾಳಜಿ ಮತ್ತು ಬೆಂಬಲಕ್ಕೆ ಧನ್ಯವಾದಗಳನ್ನು ತಿಳಿಸಿದ್ದಾರೆ.

ಸ್ಯಾಂಡಲ್‍ವುಡ್‍ನ ಖ್ಯಾತ ನಿರ್ಮಾಪಕರಾಗಿದ್ದ ರಾಮು ಅವರು ಉಸಿರಾಟದ ತೊಂದರೆಯಿಂದಾಗಿ ಎಂಎಸ್ ರಾಮಯ್ಯ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಚಿಕಿತ್ಸೆ ಫಲಕಾರಿಯಾಗದೆ ಎಪ್ರಿಲ್ 26ರಂದು ಸಾವನ್ನಪ್ಪಿದ್ದರು. ಎಕೆ 47, ಲಾಕಪ್ ಡೆತ್, ಕಲಾಸಿಪಾಳ್ಯ, ಸಿಬಿಐ ದುರ್ಗಾ ಸೇರಿದಂತೆ‌ ದುಬಾರಿ‌ ಬಜೆಟ್ ಸಿನಿಮಾಗಳನ್ನು ನಿರ್ಮಿಸಿದ್ದರು. 

ನಟಿ ಮಾಲಾಶ್ರೀ ಅವರು ತಮ್ಮ ಟ್ವೀಟರ್ ಖಾತೆಯಲ್ಲಿ‌ ಟ್ವೀಟ್ ಮಾಡಿದ್ದಾರೆ. ಕಳೆದ 12 ದಿನಗಳಿಂದ ನಾನು ತುಂಬಾ ನೋವನ್ನು ಅನುಭವಿಸುತ್ತಿದ್ದೇನೆ. ನಮ್ಮ ಕುಟುಂಬದವರೆಲ್ಲರೂ ಕೂಡ ರಾಮು ಅವರ ಮರಣದಿಂದ ನೊಂದಿದ್ದಾರೆ. ರಾಮು ಅವರು ನಮಗೆ ಯಾವತ್ತು ಬೆನ್ನಲುಬಾಗಿದ್ದರು. ಸದಾ ನಮಗೆ ಪ್ರೋತ್ಸಾಹಕರಾಗಿ ದ್ದರು.

ರಾಮು ಅವರ ನಿಧನದ ಬೆನ್ನಲ್ಲೇ ಸಿನಿಮಾ ಇಂಡಸ್ಟ್ರಿಯವರು ಸಂತಾಪ ಸೂಚಿಸಿ ನಮಗೆ ಧೈರ್ಯ ತುಂಬಿದ್ದರು. ನಮ್ಮ ಕಷ್ಟಕಾಲ ದಲ್ಲಿ ನಮಗೆ ಧೈರ್ಯ ತುಂಬಿದ ಸಿನಿಮಾ ಕಲಾವಿದರು, ಮಾಧ್ಯಮ ಮಿತ್ರರು, ನಿರ್ಮಾಪಕರು, ಟೆಕ್ನಿಷಿಯನ್ ಸೇರಿದಂತೆ ಪ್ರತಿಯೊಬ್ಬ ರಿಗೂ ಧನ್ಯವಾದ ಎಂದಿದ್ದಾರೆ.

Comments are closed.