ಕನ್ನಡ ಕಿರುತೆರೆಯಲ್ಲಿ ಪ್ರಸಾರವಾಗುತ್ತಿದ್ದ ಜೊತೆ ಜೊತೆಯಲಿ ಧಾರಾವಾಹಿಯಿಂದ ಹೊರ ನಡೆದ ನಂತರ ನಟ ಅನಿರುದ್ಧ (Aniruddha Jatkar) ಮುಂದೇನು ಮಾಡುತ್ತಾರೆ ಎನ್ನುವ ಕುತೂಹಲ ನೆಚ್ಚಿನ ಅಭಿಮಾನಗಳಲ್ಲಿ ಇತ್ತು. ಕಿರುತೆರೆ ನಿರ್ಮಾಪಕರ ಸಂಘವು ಅನಿರುದ್ಧಗಾಗಿ ಯಾರು ಧಾರಾವಾಹಿ ಮಾಡಬಾರದು ಎಂದು ಅಲಿಖಿತ ಫಾರ್ಮಾನು ಹೊರಡಿಸಿತ್ತು. ಯಾವುದೇ ವಾಹಿನಿಗಳು ಕೂಡ ಇವರಿಗೆ ಕೆಲಸ ಕೊಡದಂತೆ ಮನವಿ ಮಾಡಿಕೊಂಡಿತು. ಆದರೆ ಇದೀಗ ಚಿತ್ರಣ ಬೇರೆ ರೀತಿಯಲ್ಲೇ ಬದಲಾದ ರೀತಿ ಕಾಣುತ್ತದೆ.
ಇದೀಗ ಉದಯವಾಹಿನಿ ನಿರ್ಮಾಪಕರು ಮಾಡಿಕೊಂಡಿದ್ದ ಮನವಿಯನ್ನು ತಳ್ಳಿ ಹಾಕಿದೆ. ಅದರ ಪರಿಣಾಮವಾಗಿ ಅನಿರುದ್ಧ ಅವರನ್ನು “ಸೂರ್ಯವಂಶ” ಧಾರಾವಾಹಿಗೆ ಪ್ರಮುಖ ಪಾತ್ರಕ್ಕೆ ಆಯ್ಕೆ ಮಾಡಿಕೊಳ್ಳಲಾಗಿದೆ. ಇದರ ಬಗ್ಗೆ ಸ್ವತಃ ಅನಿರುದ್ಧ ಅವರೇ ಸ್ಪಷ್ಟಪಡಿಸಿದ್ದಾರೆ. ತಾವು ಉದಯ ವಾಹಿನಿಯಲ್ಲಿ ಪ್ರಸಾರವಾಗಲಿರುವ “ಸೂರ್ಯವಂಶ” ಧಾರಾವಾಹಿಯಲ್ಲಿ ನಟಿಸುತ್ತಿರುವುದಾಗಿ ತಿಳಿಸಿದ್ದಾರೆ.
ಇದರ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅನಿರುದ್ಧ, ” ಅತ್ಯಂತ ಸಂತೋಷದಿಂದ ತಮ್ಮೆಲ್ಲರ ಜೊತೆ ಒಂದು ಸಿಹಿ ಸುದ್ದಿ ಹಂಚಿಕೊಳ್ಳುತ್ತಾ ಇದ್ದೇನೆ. ನಮ್ಮೆಲ್ಲರ ನೆಚ್ಚಿನ ಉದಯ ವಾಹಿನಿಯಲ್ಲಿ ಅತಿ ಶೀಘ್ರದಲ್ಲಿ ಪ್ರಸಾರವಾಗಲಿರುವ ಕಲಾ ಸಾಮ್ರಾಟ್ ಎಸ್. ನಾರಾಯಣ್ ಅವರ ರಚನೆ ಹಾಗೂ ನಿರ್ದೇಶನದ ಹೊಸ ಧಾರಾವಾಹಿ “ಸೂರ್ಯವಂಶ” ದಲ್ಲಿ ನಾನು ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಾ ಇದ್ದೇನೆ. ಇದು ತಮ್ಮೆಲ್ಲರ ಹಾರೈಕೆ, ಆಶೀರ್ವಾದಗಳ ಫಲ ತಮ್ಮ ಪ್ರೀತಿ ಪ್ರೋತ್ಸಾಹ ನನ್ನ ಮೇಲೆ ಸದಾ ಇರುತ್ತೆ ಅನ್ನೋ ಭರವಸೆ ನನಗಿದೆ” ಎಂದು ಬರೆದುಕೊಂಡಿದ್ದಾರೆ.
ಇದನ್ನೂ ಓದಿ : Ambareesh-Sumalatha : 31ನೇ ಮದುವೆ ವಾರ್ಷಿಕೋತ್ಸವದಂದು ಅಂಬರೀಶ್ ನೆನೆದ ಸುಮಲತಾ
ಇದನ್ನೂ ಓದಿ : Kantara Movie in English : ಇಂಗ್ಲೀಷ್ ಭಾಷೆಗೆ ಡಬ್ ಆಗಲಿದೆ ರಿಷಬ್ ಶೆಟ್ಟಿ ನಟನೆಯ “ಕಾಂತಾರ”
ಸೂರ್ಯವಂಶ ಹೆಸರನ್ನು ಕೇಳಿದ ತಕ್ಷಣವೇ ನೆನಪಾಗುವ ಕಲಾವಿದ ವಿಷ್ಣುವರ್ಧನ್. ಇದೀಗ ಅದೇ ಹೆಸರಿನಲ್ಲಿ ಮೂಡಿ ಬರುತ್ತಿರುವ ಧಾರಾವಾಹಿಗೆ ವಿಷ್ಣು ಅಳಿಯ ಅನಿರುದ್ಧ ನಾಯಕ. ಹೀಗಾಗಿ ಧಾರಾವಾಹಿ ಬಗ್ಗೆ ಸಹಜವಾಗಿಯೇ ಎಲ್ಲರಲ್ಲೂ ಕುತೂಹಲ ಮೂಡಿದೆ. ಇದರ ಬಗ್ಗೆ ಕಿರುತೆರೆ ನಿರ್ಮಾಪಕ ಸಂಘ ಏನು ಹೇಳುತ್ತದೆ. ಎಂದು ಕಾದು ನೋಡಬೇಕಾಗಿದೆ. ಜೊತೆ ಜೊತೆಯಲಿ ಬಿಟ್ಟ ನಂತರ ಮತ್ತೊಂದು ಸೀರಿಯಲ್ಗೆ ನಾಯಕನಾಗಿರುವ ಅನಿರುದ್ಧ ಅವರಿಗೆ ಅಭಿಮಾನಿಗಳು ಶುಭ ಹಾರೈಸಿದ್ದಾರೆ.
Aniruddha Jatkar is back on TV: Hero for the serial “Suryavamsa”.