ಮಂಗಳವಾರ, ಜೂನ್ 17, 2025
HomeCinemaAparoopa Movie : ಅಪರೂಪ ಸಿನಿಮಾದ ಟ್ರೇಲರ್ ರಿಲೀಸ್ : ಹೊಸಬರಿಗೆ ಡಾಲಿ ಧನಂಜಯ್ ಸಾಥ್

Aparoopa Movie : ಅಪರೂಪ ಸಿನಿಮಾದ ಟ್ರೇಲರ್ ರಿಲೀಸ್ : ಹೊಸಬರಿಗೆ ಡಾಲಿ ಧನಂಜಯ್ ಸಾಥ್

- Advertisement -

ಸ್ಯಾಂಡಲ್‌ವುಡ್‌ ಹೆಸರಾಂತ ನಿರ್ದೇಶಕ ಮಹೇಶ್ ಬಾಬು ಅವರ ನಿರ್ದೇಶನ ಅಪರೂಪ ಸಿನಿಮಾ (Aparoopa Movie) ತೆರೆಗೆ ಬರಲು ಸಜ್ಜಾಗಿದೆ. ಜುಲೈ 14ರಂದು ಬಿಡುಗಡೆಯಾಗುತ್ತಿರುವ ಈ ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ. ಅರಸು, ಆಕಾಶ್ ನಂತಹ ವಿಭಿನ್ನ ಹಾಗೂ ವಿಶಿಷ್ಟ ಪ್ರೇಮಕಥೆಗಳ ನಿರ್ದೇಶಿಸಿ ಸೈ ಎನಿಸಿಕೊಂಡಿರುವ ಮಹೇಶ್ ಬಾಬು ಅಪರೂಪ ಸಿನಿಮಾದ ಮೂಲಕ ಮತ್ತೊಂದು ಫ್ರೆಶ್ ಅಂಡ್ ಫೀಲ್ ಸ್ಟೋರಿ ಉಣಬಡಿಸಲಿದ್ದಾರೆ. ಬಿಡುಗಡೆ ಹೊಸ್ತಿನಲ್ಲಿರುವ ಈ ಸಿನಿಮಾದ ಟ್ರೇಲರ್ ನ್ನು ನಟ ರಾಕ್ಷಸ ಡಾಲಿ ಧನಂಜಯ್ ಬಿಡುಗಡೆ ಮಾಡಿ ಇಡೀ ತಂಡಕ್ಕೆ ಶುಭಾಶಯ ಕೋರಿದ್ದಾರೆ.

ಡಾಲಿ ಧನಂಜಯ್ ಮಾತನಾಡಿ, ಕನ್ನಡ ಸಿನಿರಂಗಕ್ಕೆ ಮಹೇಶ್ ಬಾಬು ಅವರು ತುಂಬಾ ಹಿಟ್ ಗಳನ್ನು ಕೊಟ್ಟಿದ್ದಾರೆ. ಅಪರೂಪ ಇನ್ನೊಂದು ಹಿಟ್ ಸೇರಲಿ. ಸುಘೋಷ್ ಸ್ಕ್ರೀನ್ ಪ್ರೆಸೆನ್ಸ್ ತುಂಬಾ ಚೆನ್ನಾಗಿದೆ. ತುಂಬಾ ಚೆನ್ನಾಗಿ ಡ್ಯಾನ್ಸ್ ಮಾಡಿದ್ದಾರೆ. ತುಂಬಾ ಪ್ರಿಪೇರ್ ಆಗಿ ಬಂದಿದ್ದಾರೆ. ಕನ್ನಡ ಇಂಡಸ್ಟ್ರೀಗೆ ಅವರಿಗೆ ಸ್ವಾಗತ. ಹೃತಿಕಾ ಅವರ ಸ್ಕ್ರೀನ್ ಪ್ರೆಸೆನ್ಸ್, ಡ್ಯಾನ್ಸ್ ಕೂಡ ಚೆನ್ನಾಗಿದೆ. ಸುಗ್ಗಿ ಸಿನಿಮಾ ದೊಡ್ಡ ಸುದ್ದಿಯಾಗಲಿ. ಸಿನಿಮಾ ಒಳ್ಳೆ ಸುಗ್ಗಿಯಾಗಲಿ. ಇಡೀ ತಂಡಕ್ಕೆ ಒಳ್ಳೆಯದಾಗಲಿ ಎಂದು ಹೇಳಿದ್ದಾರೆ.

ಅಪರೂಪ ಸಿನಿತಂಡ

ಮಹೇಶ್ ಬಾಬು ಮಾತನಾಡಿ, ಈ ಕಾರ್ಯಕ್ರಮಕ್ಕೆ ಪ್ರೋತ್ಸಾಹ ಕೊಟ್ಟಿರುವ ಧನಂಜಯ್ ಅವರಿಗೆ ಧನ್ಯವಾದಗಳು. ಅಪರೂಪ ಅನ್ನೋದು ಲವ್ ಸ್ಟೋರಿ. ನಾನು ಹೆಚ್ಚಾಗಿ ಲವ್ ಸ್ಟೋರಿ ಸಿನಿಮಾಗಳನ್ನೇ ಮಾಡಿದ್ದೇನೆ. ಈ ಚಿತ್ರದಲ್ಲಿ ವಿಲನ್ ಗಳಿಲ್ಲ. ಹೀರೋ-ಹೀರೋಯಿನ್ ಗಳೇ ವಿಲನ್ ಗಳು. ಉಳಿದಿದ್ದು ತೆರೆಮೇಲೆ ನೋಡಿ. ಹೊಸ ನಾಯಕ ನಾಯಕಿ ಮೇಲೆ ನಿಮ್ಮ ಹಾರೈಕೆ ಇರಲಿ. ಎಲ್ಲರೂ ಸಿನಿಮಾ ನೋಡಿ ಪ್ರೋತ್ಸಾಹ ಕೊಡಿ ಎಂದರು.

ನಾಯಕ ಸುಘೋಷ್ ಮಾತನಾಡಿ, ಟ್ರೇಲರ್ ನಿಮಗೆ ಇಷ್ಟವಾಗಿದೆ ಎಂದುಕೊಳ್ಳುತ್ತೇನೆ. ಜುಲೈ 14ಕ್ಕೆ ಸಿನಿಮಾ ರಿಲೀಸ್ ಆಗುತ್ತಿದೆ. ಹೊಸಬರಿಗೆ ಈಗಿನ ಟೈಮ್ ನಲ್ಲಿ ಗೆಲ್ಲುವುದು ತುಂಬಾ ಕಷ್ಟವಿದೆ. ಜನ ಅಷ್ಟಾಗಿ ಥಿಯೇಟರ್ ಗೆ ಬಂದು ಸಿನಿಮಾ ನೋಡುತ್ತಿಲ್ಲ. ಈ ಚಿತ್ರದಿಂದ ನಾನು ತುಂಬಾ ಕಲಿತ್ತಿದ್ದೇನೆ. ನಿಮ್ಮ ಬೆಂಬಲ ನಮ್ಮ ಮೇಲೆ ಇರಲಿ ಎಂದು ತಿಳಿಸಿದರು.

ಅಪರೂಪ ಸಿನಿಮಾ ಮೂಲಕ ಸುಘೋಷ್ ಮತ್ತು ಹೃತಿಕಾ ಕನ್ನಡ ಸಿನಿಮಾ ಲೋಕಕ್ಕೆ ನಾಯಕ ಹಾಗೂ ನಾಯಕಿಯಾಗಿ ಪದಾರ್ಪಣೆ ಮಾಡುತ್ತಿದ್ದಾರೆ. ನಿರ್ದೇಶಕ ಮಹೇಶ್ ಬಾಬು ಅವರು ನಾಯಕ ನಾಯಕಿಯ ನಡುವೆ ಬರುವ ಅಹಂ ಏನೆಲ್ಲಾ ಸಮಸ್ಯೆ ಉಂಟು ಮಾಡುತ್ತದೆ ಎನ್ನುವುದನ್ನು ಸಿನಿಮಾದ ಮೂಲಕ ತೋರಿಸಿದ್ದಾರೆ. ಮಹೇಶ್ ಬಾಬು ನಿರ್ದೇಶನದ ಅತಿರಥ ಸಿನಿಮಾದಲ್ಲಿ ನಟಿಸಿದ್ದ ಸುಘೋಷ್ ಸಿನಿಮಾದಲ್ಲಿಯೂ ನಾಯಕನಾಗಿ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ : Nimmellara Aashirvada : ಜುಲೈ 21ಕ್ಕೆ ತೆರೆಗೆ ಬರ್ತಿದೆ ಹೊಸಬರ ‘ನಿಮ್ಮೆಲ್ಲರ ಆರ್ಶೀರ್ವಾದ’ ಸಿನಿಮಾ

ಇದನ್ನೂ ಓದಿ : Yash : ಜಪಾನಿ ಭಾಷೆಯಲ್ಲಿ ಮಾತನಾಡಿದ ರಾಕಿಂಗ್‌ ಸ್ಟಾರ್‌ ಯಶ್‌ ಕಾರಣವೇನು ಗೊತ್ತಾ ?

ಇನ್ನು ಈ ಸಿನಿಮಾದಲ್ಲಿ ಅಶೋಕ್ , ಅರುಣಾ ಬಲರಾಜ್, ಅವಿನಾಶ್, ಕುರಿಪ್ರತಾಪ್ , ದಿನೇಶ್ ಮಂಗಳೂರು, ವಿಜಯ್ ಚೆಂಡೂರು, ಕಡ್ಡಿಪುಡಿ ಚಂದ್ರು, ಮೋಹನ್ ಜುನೇಜಾ ಕೂಡ ಭಾಗವಾಗಿದ್ದಾರೆ. ಈ ಸಿನಿಮಾಕ್ಕೆ ಪ್ರಜ್ವಲ್ ಪೈ ಸಂಗೀತ ಇದೆ. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಒಂದು ಹಾಡಿಗೆ ಧ್ವನಿಯಾಗಿರುವುದು ವಿಶೇಷ. ಬೆಂಗಳೂರು, ಮೈಸೂರು, ಚಿಕ್ಕಮಗಳೂರು, ಕಾಶ್ಮೀರದಲ್ಲಿ ಶೂಟಿಂಗ್ ನಡೆಸಲಾಗಿದ್ದು, ಸೂರ್ಯಕಾಂತ್ ಕ್ಯಾಮೆರಾ ಕೈಚಳಕ ಸಿನಿಮಾಕ್ಕಿದೆ. ಸುಗ್ಗಿ ಸಿನಿಮಾಸ್ ಬ್ಯಾನರ್ ನಡಿ ತಯಾರಾಗಿರುವ ಅಪರೂಪ ಸಿನಿಮಾ ಜುಲೈ 14ಕ್ಕೆ ತೆರೆಗೆ ಬರುತ್ತಿದೆ.

Aparoopa Movie Trailer Released: Dolly Dhananjay Encouraged Newcomer

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular