ಸ್ಯಾಂಡಲ್ ವುಡ್ ನ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಈ ಬಾರಿ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ. ಬದಲಾಗಿ ಬಡವರಿಗೆ ಸಹಾಯ ಮಾಡಿ ಅಂತಾ ಪ್ರಜ್ವಲ್ ದೇವರಾಜ್ ತನ್ನ ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ.
ಜುಲೈ 4ರಂದು ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಹುಟ್ಟುಹಬ್ಬ. ಪ್ರತೀ ವರ್ಷವೂ ಅಭಿಮಾನಿಗಳ ಜೊತೆಗೆ ಪ್ರಜ್ವಲ್ ದೇವರಾಜ್ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ರು. ಆದ್ರೆ ಈ ಬಾರಿ ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿದೆ.
ಕೊರೊನಾ ಸೋಂಕು ಸಮಸ್ಯೆಯನ್ನು ತಂದೊಡ್ಡುತ್ತಿದೆ. ಇಂತಹ ಸಂದರ್ಭದಲ್ಲಿ ಗುಂಪು ಸೇರುವುದು ಸರಿಯಲ್ಲ. ಹೀಗಾಗಿ ಈ ವರ್ಷ ನಾನು ಯಾರನ್ನೂ ಭೇಟಿಯಾಗುವುದಿಲ್ಲ.
ನನ್ನ ಹುಟ್ಟು ಹಬ್ಬಕ್ಕೆ ತರುತ್ತಿದ್ದ ಕೇಕ್, ಹೂವಿನ ಹಾರದ ಖರ್ಚಿನಲ್ಲಿ ಬಡವರಿಗೆ ಸಹಾಯವನ್ನು ಮಾಡಿ, ಇದು ನನಗೆ ನೀವು ಕೊಡುವ ದೊಡ್ಡ ಗಿಫ್ಟ್ ಎಂದು ಅಭಿಮಾನಿಗಳಲ್ಲಿ ಪ್ರಜ್ವಲ್ ದೇವರಾಜ್ ಮನವಿ ಮಾಡಿದ್ದಾರೆ.