Padaraya Movie : ಪಾದರಾಯ ಸಿನಿಮಾದಲ್ಲಿ ಕಿಚ್ಚ ಸುದೀಪ್ : ತೆರೆಗೆ ಬರಲಿದೆ ನೈಜ ಘಟನೆಯ ಸಿನಿಮಾ

ನಟ ಕಿಚ್ಚ ಸುದೀಪ್‌ ಅಭಿನಯದ “ವಿಕ್ರಾಂತ್‌ ರೋಣ” ಸಿನಿಮಾವನ್ನು ಜಾಕ್‌ ಮಂಜು ನಿರ್ಮಾಣ ಮಾಡಿದ್ದು, ಇದೀಗ ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ. (Padaraya Movie) ಇದೊಂದು ಪ್ಯಾನ್‌ ಇಂಡಿಯಾ ಸಿನಿಮಾವಾಗಿದ್ದು, ಸುದೀಪ್‌ ಅವರು ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ. ನಟ – ನಿರ್ದೇಶಕರಾಗಿ ನಾಗಶೇಖರ್‌ ಈ ಸಿನಿಮಾದಲ್ಲಿ ನಟಿಸಲಿದ್ದು, ಚಕ್ರವರ್ತಿ ಚಂದ್ರಚೂಡ ಈ ಸಿನಿಮಾದ ನಿರ್ದೇಶನ ಮಾಡಲಿದ್ದಾರೆ.

ಸಿನಿಮಾಕ್ಕೆ “ಪಾದರಾಯ” ಎನ್ನುವ ಟೈಟಲ್‌ನ್ನು ಇಟ್ಟಿದ್ದು, ಕನ್ನಡ, ತಮಿಳು, ತೆಲುಗು, ಮಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿ ಸಿನಿಮಾ ತೆರೆ ಕಾಣಲಿದೆ. ಈ ಸಿನಿಮಾಕ್ಕೆ ಕಾಂತಾರ ಖ್ಯಾತಿಯ ಅಜನೀಶ್‌ ಲೋಕನಾಥ್‌ ಸಂಗೀತ ಸಂಯೋಜನೆಯನ್ನು ಮಾಡಲಿದ್ದಾರೆ. ಈ ಸಿನಿಮಾದ ಛಾಯಗ್ರಹಣವನ್ನು ಸತ್ಯ ಹೆಗಡೆ ಮಾಡಲಿದ್ದಾರೆ. ಪಾದಾರಾಯ ಸಿನಿಮಾಕ್ಕೆ ತಮಿಳಿನ ಖ್ಯಾತ ಸಂಕನನಕಾರ ಆಂಟೊನಿ ಸಂಕಲನ ಮಾಡುತ್ತಿದ್ದು ಮುಂತಾದ ಖ್ಯಾತನಾಮರು ಕಾರ್ಯ ನಿರ್ವಹಿಸುತ್ತಿರುವುದು ಸಿನಿಮಾದ ಮತ್ತೊಂದು ವಿಶೇಷವಾಗಿದೆ.

ಈ ಸಿನಿಮಾಕ್ಕೆ ಚಕ್ರವರ್ತಿ ಚಂದ್ರಚೂಡ್‌ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಖ್ಯಾತ ನಿರ್ದೇಶಕ ಹಾಗೂ ನಟ ನಾಗಶೇಖರ್‌ ನಾಯಕ ನಟನಾಗಿ ನಟಿಸುವುದರ ಜೊತೆಗೆ ನಿರ್ಮಾಣ ಹೊಣೆಯನ್ನು ಹೊತ್ತಿದ್ದಾರೆ. ದೇಶವ್ಯಾಪಿ ಸುದ್ದಿ ಮಾಡಿದ ನೈಜ ಘಟನೆಯೊಂದಎ ಆಧಾರಿತ ಈ ಸಿನಿಮಾ ಹಲವು ಜೀವಂತ ಘಟ್ಟಗಳಿಂದ ಕೂಡಿದ್ದು, ಹಾಗಾಗಿ ಹನುಮ ಜಯಂತಿಯಂದು ಶೀರ್ಷಿಕೆ ಬಿಡುಗಡೆ ಮಾಡಿದ್ದಾರೆ. ಈ ಸಿನಿಮಾದ ಚಿತ್ರೀಕರಣವನ್ನು ಜನವರಿಯಿಂದ ಪ್ರಾರಂಭಿಸಲಿದ್ದಾರೆ.

ಇದನ್ನೂ ಓದಿ : Directed by Natesh Hegde: “ಕಾಂತಾರ” ಮತ್ತು “ಆರ್‌ಆರ್‌ಆರ್‌” ಸಿನಿಮಾ ಬಗ್ಗೆ ಅಭಿಪ್ರಾಯ ಹಂಚಿಕೊಂಡ ನಿರ್ದೇಶಕ ನಟೇಶ್‌ ಹೆಗ್ಡೆ

ಇದನ್ನೂ ಓದಿ : S.K Bhagavan: ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಭಗವಾನ್ ಆರೋಗ್ಯ ಸ್ಥಿತಿ ಗಂಭೀರ: ಐಸಿಯುನಲ್ಲಿ ಚಿಕಿತ್ಸೆ

ಇದನ್ನೂ ಓದಿ : Mandeep Roy: ಕನ್ನಡದ ಹಿರಿಯ ನಟ ಮನ್ ದೀಪ್ ರಾಯ್ ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

2016ರ ಸಮಯದಲ್ಲಿ ನಡೆದ ಒಂದು ನೈಜ ಘಟನೆಯನ್ನು ಸಿನಿಮಾಕ್ಕಾಗಿ ಆಯ್ಕೆ ಮಾಡಿಕೊಂಡಿರುವುದು ಈ ಸಿನಿಮಾದ ವಿಶೇಷವಾಗಿದೆ. ಅಂಜನಾದ್ರಿಯ ಸುತ್ತಾಮುತ್ತಾ ತುಂಬಾ ಬ್ಯಾಕ್‌ ವಾಟರ್‌ನಲ್ಲಿ ಕಥಡ ನಡೆಯುಲಿದೆ. ಪಾದರಾಯ ಕಥೆಗೂ ಮತ್ತು ಆಂಜನೇಯ ಪಾದಕ್ಕೂ ನಂಟಿರುತ್ತದೆ. ಜೊತೆಗೆ ಅಯೋಧ್ಯೆಯಿಂದ ಬೆಂಗಳೂರಿನವರೆಗೂ ಕಥೆ ಸಾಗಿ ಬರಲಿದೆ ಎನ್ನುವುದು ಕುತೂಹಲದ ಅಂಶಗಳಾಗಿದೆ.

Kiccha Sudeep in Padaraya Movie: A movie based on real events will be released

Comments are closed.