Mandeep Roy: ಕನ್ನಡದ ಹಿರಿಯ ನಟ ಮನ್ ದೀಪ್ ರಾಯ್ ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

ಬೆಂಗಳೂರು: ಕನ್ನಡ ಸಿನಿರಂಗದ ಹಿರಿಯ ನಟ ಮನ್ ದೀಪ್ ರಾಯ್ (Mandeep Roy) ಅವರಿಗೆ ಹೃದಯಾಘಾತ ಉಂಟಾಗಿದೆ. ಹೀಗಾಗಿ ಅವರನ್ನು ಬೆಂಗಳೂರಿನ ಶೇಷಾಧ್ರಿಪುರಂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

ಕಳೆದ 3 ದಿನಗಳ ಹಿಂದೆಯೇ ಅವರಿಗೆ ಹೃದಯಾಘಾತವಾಗಿದೆ ಎಂದು ಹೇಳಲಾಗುತ್ತಿದೆ. ಇನ್ನು ಈ ವಿಚಾರ ಬಹಿರಂಗಗೊಳ್ಳುತ್ತಿದ್ದಂತೆ ಆಪ್ತರು ಆಸ್ಪತ್ರೆಗೆ ಭೇಟಿ ನೀಡಿ ಯೋಗಕ್ಷೇಮ ವಿಚಾರಿಸುತ್ತಿದ್ದಾರೆ. ಸದ್ಯ ಮನ್ ದೀಪ್ ರಾಯ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬರುತ್ತಿದ್ದು, ಇನ್ನೂ ಕೆಲ ದಿನಗಳ ಕಾಲ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆದುಕೊಳ್ಳಲಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.

ಇದನ್ನೂ ಓದಿ: Kranti Movie Dharani Song Release : ಕ್ರಾಂತಿ ಸಿನಿಮಾದ “ಧರಣಿ” ಹಾಡಿನ ಸೀಕ್ರೆಟ್‌ ಬಿಚ್ಚಿಟ್ಟ ದರ್ಶನ್‌ ತೂಗುದೀಪ್

ಮನ್ ದೀಪ್ ರಾಯ್ ಅವರು ಚಂದನವನದ ಹಿರಿಯ ನಟ. ಸುಮಾರು 500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಪೋಷಕ ನಟರಾಗಿ ಇವರು ನಟಿಸಿದ್ದಾರೆ. ಹಲವು ದಶಕಗಳಿಂದ ಹಾಸ್ಯ ಕಲಾವಿದರಾಗಿ ಪ್ರೇಕ್ಷಕರನ್ನು ರಂಜಿಸಿದ ಇವರು ಅನಂತ್ ನಾಗ್, ಶಂಕರ್ ನಾಗ್ ಜೊತೆಗೆ ಚಿತ್ರೋದ್ಯಮಕ್ಕೆ ಕಾಲಿಟ್ಟಿದ್ದರು. ಬೆಂಕಿಯ ಬಲೆ, ಮಿಂಚಿನ ಓಟ, ಏಳು ಸುತ್ತಿನ ಕೋಟೆ, ಆಕಸ್ಮಿಕ, ಆಸೆಗೊಬ್ಬ ಮೀಸೆಗೊಬ್ಬ, ಆಪ್ತರಕ್ಷಕ, ಆಂಟಿ ಪ್ರೀತ್ಸೆ, ಪ್ರೀತ್ಸೋದು ತಪ್ಪಾ ಹೀಗೆ ನೂರಾರು ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ಡಾ. ರಾಜ್ ಕುಮಾರ್ ಅವರ ಕಾಲದಿಂದ ಹಿಡಿದು ಎಲ್ಲಾ ಹೆಸರಾಂತ ಕನ್ನಡ ನಟರ ಜೊತೆಗೆ ನಟಿಸಿರುವ ಹೆಗ್ಗಳಿಕೆ ಇವರದ್ದು.

ಆದರೆ ಇದೀಗ ಅವರ ಚಿಕಿತ್ಸೆಗೆ ಹಣಕಾಸಿನ ತೊಂದರೆ ಉಂಟಾಗಿದ್ದು, ಇವರಿಗೆ ಆರ್ಥಿಕ ನೆರವಿನ ಅವಶ್ಯಕತೆ ಇದೆ ಎಂದು ಹೇಳಲಾಗುತ್ತಿದೆ. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಮನ್ ದೀಪ್ ರಾಯ್ ಶೀಘ್ರದಲ್ಲಿ ಗುಣಮುಖರಾಗಲಿ ಎಂದು ಅಭಿಮಾನಿಗಳು ಹಾರೈಸಿದ್ದಾರೆ.

ಇದನ್ನೂ ಓದಿ: Rishab Shetty visits Anegudde: ಆನೆಗುಡ್ಡೆಗೆ ಭೇಟಿ ನೀಡಿದ ರಿಷಬ್ ಶೆಟ್ಟಿ ದಂಪತಿ: ವಿನಾಯಕನ ಸನ್ನಿಧಾನದಲ್ಲಿ ವಿಶೇಷ ಪೂಜೆ

ಇದನ್ನೂ ಓದಿ: Stunt Master death: ಸಿನಿಮಾ ಶೂಟಿಂಗ್ ವೇಳೆ ಮತ್ತೊಂದು ದುರಂತ; ಕ್ರೇನ್ ನಿಂದ 20 ಅಡಿ ಕೆಳಗೆ ಬಿದ್ದು ಸಾಹಸ ನಿರ್ದೇಶಕ ದುರ್ಮರಣ

Mandeep Roy: Famous senior Kannada actor Mandeep Roy Hospitalized due to Heart attack

Comments are closed.