Jaggesh: ಹೆಣ್ಣುಮಕ್ಕಳನ್ನು ಗೌರವಿಸದವರು ರಾಕ್ಷಸರು: ಮೈಸೂರು ಕೃತ್ಯಕ್ಕೆ ನವರಸನಾಯಕ ಜಗ್ಗೇಶ್ ಖಂಡನೆ

ಬೆಂಗಳೂರು: ಮೈಸೂರಿನ ಲಲಿತಾದ್ರಿ ಬೆಟ್ಟದಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ನಡೆದ ಪೈಶಾಚಿಕ ಕೃತ್ಯಕ್ಕೆ ಸಾಂಸ್ಕೃತಿಕ ನಗರಿ ಬೆಚ್ಚಿ ಬಿದ್ದಿದೆ. ಗ್ಯಾಂಗ್ ರೇಪ್ ಸಂತ್ರಸ್ಥೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಮೂರು ತಂಡಗಳಲ್ಲಿ ಕಾರ್ಯಾಚರಣೆ ಕೈಗೊಂಡಿದ್ದಾರೆ.

ಕಾಲೇಜು ವಿದ್ಯಾರ್ಥಿನಿ ಮೇಲೆ ನಡೆದ ಕ್ರೌರ್ಯಕ್ಕೆ ಎಲ್ಲೆಡೆಯಿಂದಲೂ ಖಂಡನೆ ವ್ಯಕ್ತವಾಗುತ್ತಿದ್ದು, ಘಟನೆ ಬಗ್ಗೆ ನವರಸ ನಾಯಕ ಜಗ್ಗೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಅಭಿಪ್ರಾಯ ಹಂಚಿಕೊಂಡಿರುವ ಜಗ್ಗೇಶ್, ಹೆಣ್ಣುಮಕ್ಕಳನ್ನು ಗೌರವಿಸದವರು ರಾಕ್ಷಸರು ಎಂದಿದ್ದಾರೆ.

ಎಂಥ ಕ್ರೂರಿಗಳು..ತಾಯಿ ಹೆಣ್ಣಲ್ಲವೇ? ಅಕ್ಕ-ತಂಗಿ ಹೆಣ್ಣಲ್ಲವೇ? ಮಡದಿ ಹೆಣ್ಣಲ್ಲವೇ? ಹೆಣ್ಣುಮಕ್ಕಳನ್ನು ಗೌರವಿಸದವರು ರಕ್ಕಸರು.  ಈ ಕೃತ್ಯ ಎಸಗಿದ ಕ್ರೂರರು ಗಲ್ಲು ಶಿಕ್ಷೆಗೆ ಅರ್ಹರು. ಈ ಕ್ರೂರ ಕೃತ್ಯಕ್ಕೆ ಖಂಡನೆ ಎಂದು ಟ್ವೀಟ್ ಮಾಡಿದ್ದಾರೆ.

ಇನ್ನೂ ಹಲವು ಗಣ್ಯರು, ರಾಜಕೀಯ ನಾಯಕರು ಕೃತ್ಯ ಖಂಡಿಸಿದ್ದು, ಸೋಷಿಯಲ್ ಮೀಡಿಯಾದಲ್ಲಿ ಸಾಂಸ್ಕೃತಿಕ ನಗರಿ ಘಟನೆಗೆ ಕಾರಣವಾದವರಿಗೆ ತಕ್ಕ ಶಿಕ್ಷೆಯಾಗಬೇಕೆಂಬ ಆಗ್ರಹ ವ್ಯಕ್ತವಾಗುತ್ತಿದೆ.

Comments are closed.