ಜಾಗ್ವಾರ್‌ ನಟನಿಗೆ ಹುಟ್ಟುಹಬ್ಬದ ಸಂಭ್ರಮ : ಮುಂದಿನ ಸಿನಿಮಾ ಬಗ್ಗೆ ಮಾಹಿತಿ ಬಿಚ್ಚಿಟ್ಟ ನಿಖಿಲ್

ಸ್ಯಾಂಡಲ್‌ವುಡ್ ನಟ ನಿಖಿಲ್ ಕುಮಾರಸ್ವಾಮಿ (Nikhil Kumaraswamy’s birthday) ಇಂದು (ಜನವರಿ 22)ರಂದು 32ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ನಟ ನಿಖಿಲ್‌ ಜೆಪಿ ನಗರದ ತಮ್ಮ ನಿವಾಸದಲ್ಲಿ ಅಭಿಮಾನಿಗಳ ಸಮ್ಮುಖದಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡರು. ನೂರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಆಗಮಿಸಿ ನೆಚ್ಚಿನ ನಟನಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದರು. ಅವರ ಪ್ರತಿ ಸಿನಿಮಾವನ್ನು ಹುಟ್ಟುಹಬ್ಬದಂದು ಘೋಷಣೆ ಮಾಡಿಕೊಂಡಿದ್ದು, ಈ ಭಾರಿ ಕೂಟ ನಿಖಿಲ್ ನಟನೆಯ 4ನೇ ಸಿನಿಮಾದ ಘೋಷಣೆಯನ್ನು ಮಾಡಿಕೊಂಡಿದ್ದಾರೆ.

ಮಾಜಿ ಸಿಎಂ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ 6 ವರ್ಷಗಳ ಹಿಂದೆ ‘ಜಾಗ್ವಾರ್’ ಸಿನಿಮಾ ಮೂಲಕ ಸಿನಿರಂಗಕ್ಕೆ ಎಂಟ್ರಿ ಕೊಟ್ಟರು. ನಂತರ ‘ಸೀತಾರಾಮ ಕಲ್ಯಾಣ’, ‘ಕುರುಕ್ಷೇತ್ರ’, ‘ರೈಡರ್’ ಸಿನಿಮಾಗಳಲ್ಲಿ ನಟಿಸಿ ಅಭಿಮಾನಿಗಳ ಗಮನ ಸೆಳೆದರು. ಜೆಡಿಎಸ್‌ ಯುವ ಘಟಕ ರಾಜ್ಯಾಧ್ಯಕ್ಷರಾಗಿಯೂ ನಿಖಿಲ್ ಗುರುತಿಸಿಕೊಂಡಿದ್ದಾರೆ. ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿದೆ. ಹಾಗಾಗಿ ಪಕ್ಷ ಸಂಘಟನೆಯಲ್ಲಿ ನಿಖಿಲ್ ನಿರತರಾಗಿದ್ದಾರೆ. ಅದರ ಜೊತೆಯಲಿ ಸಿನಿಮಾ ಮಾಡುವ ಲೆಕ್ಕಾಚಾರದಲ್ಲಿದ್ದಾರೆ. ಸದ್ಯ ನಿಖಿಲ್ ನಟನೆಯ ‘ಯದುವೀರ್’ ಸಿನಿಮಾ ನಿಂತು ಹೋಗಿದೆ.

ಬೆಳಗ್ಗೆ ಅಭಿಮಾನಿಗಳು ಜೆಪಿ ನಗರದ ನಿಖಿಲ್ ನಿವಾಸದ ಮುಂದೆ ಜಮಾಯಿಸಿದ್ದರು. ಕಟೌಟ್, ಬ್ಯಾನರ್‌ಗಳನ್ನು ಕಟ್ಟಿ, ಕೇಕ್‌ಗಳನ್ನು ತಂದು ಕತ್ತರಿಸಿ, ಉಡುಗೊರೆ ನೀಡಿ ಸಂಭ್ರಮಿಸಿದರು. ಪತ್ನಿ ರೇವತಿ ಹಾಗೂ ಪುತ್ರ ಅವ್ಯಾನ್ ದೇವ್ ಬಾಲ್ಕನಿಯಲ್ಲಿ ನಿಂತು ಅಭಿಮಾನಿಗಳತ್ತ ಕೈ ಬೀಸಿದರು. ಚಂಡೇ ನೃತ್ಯ ತಂಡದ ಕಲಾವಿದರು ಕುಣಿಡು ಸಂಭ್ರಮಿಸಿದರು. ಹುಟ್ಟುಹಬ್ಬದ ಸಂಭ್ರಮಾಚರಣೆ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ನಿಖಿಲ್‌ ಕುಮಾರಸ್ವಾಮಿ ‘ಇವತ್ತು ಅಭಿಮಾನಿಗಳು ದೊಡ್ಡಮಟ್ಟದಲ್ಲಿ ನನ್ನ ಹುಟ್ಟುಹಬ್ಬ ಆಚರಿಸುತ್ತಿದ್ದಾರೆ.

ರಾತ್ರಿಯಿಂದಲೂ ರಾಜ್ಯದ ನಾನಾ ಜಿಲ್ಲೆಗಳಿಂದ ಆಗಮಿಸಿ ಪ್ರೀತಿ ವಿಶ್ವಾಸ ವ್ಯಕ್ತಪಡಿಸುತ್ತಿದ್ದಾರೆ. ಇದೇ ರೀತಿ ಪ್ರತಿ ಹುಟ್ಟುಹಬ್ಬಕ್ಕೂ ಅಭಿಮಾನಿಗಳು ಶುಭ ಕೋರಿದ್ದಾರೆ. ರಾಜಕಾರಣ ವ್ಯವಸ್ಥೆಯಲ್ಲಿ ಬದಲಾವಣೆ ಆಗಬೇಕು. ಮುಂದೆ ಬರುವ ಜನಪ್ರತಿನಿಧಿಗಳ ಮನಸ್ಥಿತಿ ಬದಲಾಗಬೇಕು. ಮತದಾರರ ಮನಸ್ಥಿತಿ ಬದಲಾಗಬೇಕು. ಜಾತಿಯ ವ್ಯಾಮೋಹಕ್ಕೆ ಒಳಗಾಗದೇ, ಕಷ್ಟಸುಖಕ್ಕೆ ಸ್ಪಂದಿಸುವವರ ಜೊತೆ ಯುವಕರು ಹೆಜ್ಜೆ ಹಾಕಬೇಕು’ ಎಂದು ಹೇಳಿದರು.

‘ಇನ್ನು ನಟ ನಿಖಿಲ್‌ ನಟನೆಯ 3 ಸಿನಿಮಾಗಳು ಚಿತ್ರೀಕರಣ ಹಂತದಲ್ಲಿದೆ. ಸದ್ಯ ಲಹರಿ ಸಂಸ್ಥೆ ಹಾಗೂ ಕೆ.ಪಿ ಶ್ರೀಕಾಂತ್ ನಿರ್ಮಾಣದಲ್ಲಿ ಹೊಸ ಸಿನಿಮಾ ಅನೌನ್ಸ್ ಆಗಿದೆ. ಸದ್ಯ ಚುನಾವಣೆ ಕೆಲಸಗಳಲ್ಲಿ ಬ್ಯುಸಿಯಾಗಿದ್ದೀನಿ. ಚುನಾವಣೆ ಮುಗಿದ ಮೇಲೆ ಮತ್ತೆ ಸಿನಿರಂಗಕ್ಕೆ ಬರ್ತೀನಿ. ಎಲ್ಲೂ ಹೋಗಲ್ಲ. ಸಿನಿಮಾಗಳನ್ನು ಮಾಡ್ತೀನಿ. ನನಗೆ ಒಂದು ವ್ಯಕ್ತಿತ್ವ ಇರುವುದು ದೇವೆಗೌಡರ ಮೊಮ್ಮಗ, ಕುಮಾರಸ್ವಾಮಿ ಮಗ ಎನ್ನುವುದನ್ನು ಹೊರತು ಪಡಿಸಿ ನನ್ನದೇ ಛಾಪನ್ನು ಸಿನಿರಂಗದಲ್ಲಿ ಮೂಡಿಸಿದ್ದೇನೆ. ನನ್ನ 4 ಸಿನಿಮಾಗಳನ್ನು ಅಭಿಮಾನಿಗಳು ಪ್ರೀತಿಯಿಂದ ತಗೊಂಡಿದ್ದಾರೆ ಎನ್ನುವುದು ನನ್ನ ಅನಿಸಿಕೆ ಎಂದು ಹೇಳಿದರು.

‘ಸಿನಿರಂಗ, ರಾಜಕಾರಣ ಎರಡರಲ್ಲೂ ನನ್ನ ಮೇಲೆ ಸಾಕಷ್ಟು ಜವಾಬ್ದಾರಿಗಳು ಇವೆ. ಆ ಜವಾಬ್ದಾರಿಯನ್ನು ಸರಿಯಾಗಿ ನಿಭಾಯಿಸುವ ಕೆಲಸ ಮಾಡುತ್ತೇನೆ. ಮನೋಹರ್ ಹಾಗೂ ನಾವು ಬಹಳ ದಿನಗಳಿಂದ ಚರ್ಚೆ ಮಾಡ್ತಿದ್ದೀವಿ. ಲಹರಿ ಸಂಸ್ಥೆಯವರು ಸಿನಿಮಾ ಮಾಡಲು ಒಲವು ತೋರಿಸಿದರು. ಈಗಲೇ ಸಿನಿಮಾ ಕಥೆ ಬಗ್ಗೆ ಹೆಚ್ಚು ಮಾತನಾಡುವುದು ಬೇಡ. ಮುಂದಿನ ದಿನಗಳಲ್ಲಿ ಮಾತನಾಡುತ್ತೇನೆ’ ಎಂದು ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ.

ಇದನ್ನೂ ಓದಿ : ಕೆಎಲ್ ರಾಹುಲ್ ಮತ್ತು ಆಥಿಯಾ ಶೆಟ್ಟಿ ವಿವಾಹ : ಅತಿಥಿಗಳಿಗೆ ಮೊಬೈಲ್‌ ಬಳಕೆ ನಿಷೇಧ ?

ಇದನ್ನೂ ಓದಿ : ದರ್ಶನ್‌ ಅಭಿಮಾನಿಗಳಿಂದ ಕಟೌಟ್‌ ನಿರ್ಮಾಣ : ದಾಖಲೆ ಸೃಷ್ಟಿಸಿದ ಕ್ರಾಂತಿ ಸಿನಿಮಾ

ಇದನ್ನೂ ಓದಿ : Super Singer Mangli: ಗಾಯಕಿ ಮಂಗ್ಲಿ ತೆರಳುತ್ತಿದ್ದ ಕಾರಿಗೆ ಕಲ್ಲೆಸೆತ: ಪೊಲೀಸರಿಂದ ಲಾಠಿ ಚಾರ್ಜ್‌

ಹೀರೊ ಆಗಿ ನಿಖಿಲ್ ಅಭಿನಯದ 4ನೇ ಸಿನಿಮಾವನ್ನು ಹುಟ್ಟುಹಬ್ಬದ ಸಂಭ್ರಮದಲ್ಲೇ ಘೋಷಿಸಲಾಗಿದೆ. ಇನ್ನು ಹೆಸರಿಡದ ಈ ಸಿನಿಮಾಕ್ಕೆ ಮನೋಹರ್ ಆಕ್ಷನ್ ಕಟ್ ಹೇಳಲಿದ್ದಾರೆ. ‘ಟಗರು’ ಸಿನಿಮಾ ಖ್ಯಾತಿಯ ಕೆ. ಪಿ ಶ್ರೀಕಾಂತ್ ಹಾಗೂ ಲಹರಿ ಸಂಸ್ಥೆಯ ಮನೋಹರನ್ ಬಂಡವಾಳ ಹೂಡುತ್ತಿದ್ದಾರೆ. ಸಿನಿಮಾದಲ್ಲಿ ಕಾಲೇಜು ಸ್ಟೂಡೆಂಟ್ ಪಾತ್ರದಲ್ಲಿ ನಿಖಿಲ್ ನಟಿಸುತ್ತಿದ್ದಾರೆ. ಸದ್ಯ ಸಿನಿಮಾದ ಥೀಮ್ ಪೋಸ್ಟರ್ ಕೂಡ ರಿಲೀಸ್ ಆಗಿದ್ದು ನಿಖಿಲ್ ಜೆರ್ಸಿ ತೊಟ್ಟು ಸ್ಪೋರ್ಟ್ಸ್ ಪರ್ಸನ್ ಲುಕ್‌ನಲ್ಲಿ ದರ್ಶನ ಕೊಟ್ಟಿದ್ದಾರೆ.

Nikhil Kumaraswamy’s birthday: Jaguar actor’s birthday celebration: Nikhil revealed information about his next movie

Comments are closed.