Rishab Shetty visits Anegudde: ಆನೆಗುಡ್ಡೆಗೆ ಭೇಟಿ ನೀಡಿದ ರಿಷಬ್ ಶೆಟ್ಟಿ ದಂಪತಿ: ವಿನಾಯಕನ ಸನ್ನಿಧಾನದಲ್ಲಿ ವಿಶೇಷ ಪೂಜೆ

ಉಡುಪಿ: Rishab Shetty visits Anegudde: ಕಾಂತಾರ ಸಿನಿಮಾ ರಿಲೀಸ್ ಆದ ಬಳಿಕ ಸಾಕಷ್ಟು ಬ್ಯುಸಿ ಇದ್ದ ನಟ ರಿಷಬ್ ಶೆಟ್ಟಿ ಇಂದು ಕುಂದಾಪುರ ಸಮೀಪದ ಆನೆಗುಡ್ಡೆಯ ಶ್ರೀ ವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಪತ್ನಿ ಪ್ರಗತಿ ಶೆಟ್ಟಿ , ಮಕ್ಕಳು ಸೇರಿದಂತೆ ಸಕುಟುಂಬ ಸಮೇತರಾಗಿ ದೇವರ ದರ್ಶನ ಪಡೆದಿದ್ದಾರೆ.

ಕಾಂತಾರ ಸಿನಿಮಾ ಸೆಟ್ಟೇರುವ ಮೊದಲು ಕಳೆದ ಆಗಸ್ಟ್ 28ರಂದು ಇದೇ ದೇವಸ್ಥಾನದಲ್ಲಿ ಕಾಂತಾರ ಚಿತ್ರದ ಮುಹೂರ್ತ ನಡೆದಿತ್ತು. ಬಳಿಕ ಕಾಂತಾರ ಸಿನಿಮಾ ತೆರೆಕಂಡು ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಕಷ್ಟು ಸದ್ದು ಮಾಡಿತ್ತು. ಪ್ಯಾನ್ ಇಂಡಿಯಾ ಲೆವೆಲ್ ಮಟ್ಟದಲ್ಲಿ ತನ್ನ ಸಿನಿಮಾ ಕಾಂತಾರ ಹಿಟ್ ಆದ ತೃಪ್ತಿಯಲ್ಲಿ ರಿಷಬ್ ಶೆಟ್ಟಿ ಪತ್ನಿ ಹಾಗೂ ಮಕ್ಕಳ ಸಮೇತ ಇಂದು ಆನೆಗುಡ್ಡೆ ದೇವಸ್ಥಾನಕ್ಕೆ ಭೇಟಿ ನೀಡಿ ವಿನಾಯಕ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ದೇವಸ್ಥಾನ ವತಿಯಿಂದ ರಿಷಬ್ ಶೆಟ್ಟಿ ಅವರನ್ನು ಆತ್ಮೀಯವಾಗಿ ಸ್ವಾಗತಿಸಿ ಗೌರವಿಸಲಾಯಿತು.

ಇದನ್ನೂ ಓದಿ: Hanuman Jayanti 2022: ಹನುಮ ಜಯಂತಿ 2022: ಹನುಮ ಜಯಂತಿಯ ಮಹತ್ವ ಮತ್ತು ಪೂಜಾ ವಿಧಾನ

ಇನ್ನು ಕಾಂತಾರ ಸಿನಿಮಾದ ಚಿತ್ರೀಕರಣ ನಡೆದಿರುವುದು ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರ ಹುಟ್ಟೂರಾದ ಕೆರಾಡಿಯಲ್ಲಿ. ತನ್ನ ಹುಟ್ಟೂರಿನ ಮೇಲೆ ಅತೀವ ಪ್ರೀತಿ ಹೊಂದಿರುವ ರಿಷಬ್ ಶೆಟ್ಟಿ ತಮ್ಮ ಬಹುತೇಕ ಸಿನಿಮಾಗಳಲ್ಲಿ ಹುಟ್ಟೂರಿನ ಕತೆಯನ್ನೇ ಸಾರುವ ಪ್ರಯತ್ನ ಮಾಡುತ್ತಿರುತ್ತಾರೆ. ಕಾಂತಾರ ಸಿನಿಮಾ ರಿಲೀಸ್ ಆದ ಬಳಿಕ ಒಂದೆಡೆ ಯಶಸ್ಸಿನ ಉತ್ತುಂಗಕ್ಕೇರಿದ್ರೆ, ಮತ್ತೊಂದೆಡೆ ಹಲವಾರು ವಿವಾದಗಳನ್ನು ಚಿತ್ರತಂಡ ಎದುರಿಸಿತ್ತು. ಆದರೀಗ ಎಲ್ಲಾ ಅಡೆತಡೆಗಳನ್ನು ದಾಟಿ ಕಾಂತಾರ ಸಿನಿಮಾ ಇನ್ನೂ ಸದ್ದು ಮಾಡುತ್ತಿದೆ. ಅಲ್ಲದೇ ಓಟಿಟಿಯಲ್ಲೂ ಕಾಂತಾರ ಸಿನಿಮಾ ಪ್ರದರ್ಶನ ಕಾಣುತ್ತಿದ್ದು, ಜನರಿಂದ ಭರ್ಜರಿ ರೆಸ್ಪಾನ್ಸ್ ಸಿಗುತ್ತಿದೆ.

ಶಾರುಖ್ ಖಾನ್ ಜೊತೆ ನಟಿಸುತ್ತಿಲ್ಲ:

ಇನ್ನೊಂದೆಡೆ ಹೊಂಬಾಳೆ ಬ್ಯಾನರ್ ಅಡಿಯಲ್ಲಿ ಬಾಲಿವುಡ್ ನಟ ಶಾರುಖ್ ಖಾನ್ ಅವರು ಸಿನಿಮಾ ಮಾಡುತ್ತಿದ್ದು, ರಿಷಬ್ ಶೆಟ್ಟಿ ಹಾಗೂ ರಕ್ಷಿತ್ ಶೆಟ್ಟಿ ನಟಿಸಲಿದ್ದಾರೆ ಎನ್ನುವ ಮಾತುಗಳು ಕೇಳಿಬಂದಿದ್ದವು. ಆದರೆ ಈ ವದಂತಿಗೆ ಪ್ರತಿಕ್ರಿಯೆ ನೀಡಿರುವ ರಿಷಬ್ ಶೆಟ್ಟಿ, ಈ ವಿಚಾರದ ಬಗ್ಗೆ ತನಗೇನೂ ಗೊತ್ತಿಲ್ಲ. ಆದರೆ ತಾನು ಶಾರುಖ್ ಖಾನ್ ಜೊತೆ ಸಿನಿಮಾ ಮಾಡುತ್ತೇನೆ ಅನ್ನೋದು ಸತ್ಯಕ್ಕೆ ದೂರವಾದ ಮಾತು ಖಾಸಗಿ ಸುದ್ದಿ ವಾಹಿನಿಗೆ ನೀಡಿದ ಸಂದರ್ಶನವೊಂದರಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: Prettiest Garden : ಉತ್ತರ ಭಾರತದ ಅತಿ ಸುಂದರ ಗಾರ್ಡನ್‌ಗಳು ನಿಮಗೆ ಗೊತ್ತಾ…

Rishab Shetty visits Anegudde: Rishab shetty and his wife visited Anegudde temple and offers special prayer to Lord Vinayaka

Comments are closed.