ಸೋಮವಾರ, ಏಪ್ರಿಲ್ 28, 2025
HomeBreakingಬೆಂಕಿ ಬಿರುಗಾಳಿ ಖ್ಯಾತಿಯ ಸ್ಯಾಂಡಲ್ ವುಡ್ ಖ್ಯಾತ ನಿರ್ದೇಶಕ ತಿಪಟೂರು ರಘು ಇನ್ನಿಲ್ಲ

ಬೆಂಕಿ ಬಿರುಗಾಳಿ ಖ್ಯಾತಿಯ ಸ್ಯಾಂಡಲ್ ವುಡ್ ಖ್ಯಾತ ನಿರ್ದೇಶಕ ತಿಪಟೂರು ರಘು ಇನ್ನಿಲ್ಲ

- Advertisement -

ಸ್ಯಾಂಡಲ್ ವುಡ್ ನ ಖ್ಯಾತ ಹಿರಿಯ ನಿರ್ದೇಶಕ ತಿಪಟೂರು ರಘು(83 ವರ್ಷ) ಅವರು ಇಂದು ಇಹಲೋಕ ತ್ಯಜಿಸಿದ್ದಾರೆ.

ಕಳೆದ ಮೂರು ವರ್ಷಗಳಿಂದಲೂ ಅವರು ವಯೋ ಸಹಜ‌ ಕಾಯಿಲೆ ಯಿಂದ ಬಳಲುತ್ತಿದ್ದರು. ಇಂದು ತೀವ್ರ ಉಸಿರಾಟದ ಸಮಸ್ಯೆಯಿಂದ ಅವರು ನಿಧನರಾಗಿ ದ್ದಾರೆ. ಡಾ.ರಾಜ್ ಕುಮಾರ್ ಅಭಿನಯದ ನಾಗಪೂಜಾ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ನಿರ್ದೇಶಕರಾಗಿ ಎಂಟ್ರಿ‌ ಕೊಟ್ಟ ತಿಪಟೂರು ರಘು ಹಲವು ಸೂಪರ್ ಹಿಟ್ ಸಿನಿಮಾಗಳನ್ನು ನಿರ್ದೇಶನ ಮಾಡಿದ್ದಾರೆ.

ಊರ್ವಶಿ , ಬೆಂಕಿ ಬಿರುಗಾಳಿ  ಕೆಂಪು ಹೋರಿ, ಸ್ವರ್ಣ ಮಹಲ್ ರಹಸ್ಯ, ನಾಗ ಕಾಳ ಭೈರವ, ಬೆಟ್ಟದ ಹುಲಿ, ವೀಣೆ  ಸೇರಿದಂತೆ ಒಟ್ಟು 16ಕ್ಕೂ ಅಧಿಕ ಕನ್ನಡ ಚಿತ್ರಗಳನ್ನು ನಿರ್ದೇಶಿಸಿದ್ದಾರೆ. ರಘು ಅವರು ಪತ್ನಿ, ಮಗ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ‌. ಹಿರಿಯ ನಿರ್ದೇಶಕನ ಅಂತ್ಯಕ್ರೀಯೆ ಇಂದು ಸಂಜೆ ನಡೆಯಲಿದೆ‌.

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular