ರಾಜ್ಯದ 550 ಕ್ಕೂ ಹೆಚ್ಚು ಚಿತ್ರ ಮಂದಿರಗಳಲ್ಲಿ ಇಂದು ಪುನೀತ್‌ ರಾಜ್‌ ಕುಮಾರ್ ಗೆ ಶ್ರದ್ಧಾಂಜಲಿ

ಬೆಂಗಳೂರು : ನಟ ಪುನೀತ್ ರಾಜ್‌ ಕುಮಾರ್‌ ಅವರ ಸಾವು ಕನ್ನಡ ಚಿತ್ರರಂಗಕ್ಕೆ ಭರಿಸಲಾಗದ ನಷ್ಟ‌. ಪುನೀತ್ ರಾಜ್‌ ಕುಮಾರ್‌ ಬಾರದ ಲೋಕಕ್ಕೆ ಪಯಣಿಸಿದ ಮೇಲೂ ಯಾವ ರೀತಿ ಬದುಕ ಬಹುದು ಎಂಬುದನ್ನು ತೋರಿಸಿಕೊಟ್ಟಿದ್ದಾರೆ. ಇಂತಹ ಸಾಧಕರಿಗೆ ಇಂದು ರಾಜ್ಯದ 550 ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಶ್ರದ್ಧಾಂಜಲಿ ಸಲ್ಲಿಸಲು ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಪುನೀತ್‌ ರಾಜ್‌ ಕುಮಾರ್‌ ಗೆ ಶ್ರದ್ಧಾಂಜಲಿ ಸಲ್ಲಿಸಲು ಇಂದು ಹೆಚ್ಚಿನ ಎಲ್ಲಾ ರಾಜ್ಯದ ಚಿತ್ರಮಂದಿರಗಳಲ್ಲಿ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ರಾಜ್ಯಾದ್ಯಂತ 550 ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಇಂದು ಸಂಜೆ 6 ಗಂಟೆಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಚಿತ್ರ ಪ್ರದರ್ಶಕರರು ನಟ ಪುನೀತ್ ರಾಜ್ ಕುಮಾರ್ ಶ್ರದ್ಧಾಂಜಲಿ ಕಾರ್ಯಕ್ರಮ ಆಯೋಜಿಸಲಾಗಿದೆ.

ಇದನ್ನೂ ಓದಿ: ಪವರ್ ಸ್ಟಾರ್ ಗೆ ಫಿಲ್ಮ್ ಚೆಂಬರ್ ನಮನ: ನ.16 ರಂದು ಅದ್ದೂರಿ ಕಾರ್ಯಕ್ರಮ

ಗೀತಾಂಜಲಿ, ಪುಷ್ಪಾಂಜಲಿ, ದೀಪಾಂಜಲಿ ಮೂಲಕ ನಮನ ಸಲ್ಲಿಸಲಾಗುತ್ತದೆ. ಚಿತ್ರ ಸಾಹಿತಿ ನಾಗೇಂದ್ರ ಪ್ರಸಾದ್ ರಚಿಸಿದ ಹಾಡಿನ ಮೂಲಕ ನಟ ಪುನೀತ್ ರಾಜ್ ಕುಮಾರ್ ಗೆ ಶ್ರದ್ಧಾಂಜಲಿ ಸಲ್ಲಿಸಲಾಗುತ್ತದೆ. ಪುನೀತ್ ರಾಜ್ ಕುಮಾರ್ ಭಾವಚಿತ್ರಕ್ಕೆ ಪುಷ್ಟನಮನವನ್ನು ಸಲ್ಲಿಸಿ, ಕ್ಯಾಂಡಲ್ ಗಳನ್ನು ಹಚ್ಚಿ, ಮೌನಾಚರಣೆ ಮೂಲಕ ನಮನ ಸಲ್ಲಿಸಲಿದ್ದಾರೆ.

ಇದನ್ನೂ ಓದಿ:ಪವರ್ ಸ್ಟಾರ್ ಅಭಿನಯದ ಗಂಧದ ಗುಡಿ ಬಿಡುಗಡೆ ಯಾವಾಗ ಗೊತ್ತಾ ?

(Tributes to Puneet Rajkumar today at more than 550 cinema halls in the state)

Comments are closed.