ಶಿವಮೊಗ್ಗ : ನಟ ವಿಜಯ್ ರಾಘವೇಂದ್ರ ಅವರು ಶಿವಮೊಗ್ಗ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಈ ವೇಳೆಯಲ್ಲಿ ಪೆಟ್ರೋಲ್ ಬಂಕ್ ಗೆ ತೆರಳಿ ಕಾರಿಗೆ ಪೆಟ್ರೋಲ್ ತುಂಬಿಸುವಂತೆ ಹೇಳಿದ್ದಾರೆ. ಆದರೆ ಪೆಟ್ರೋಲ್ ಬಂಕ್ ಸಿಬ್ಬಂದಿ ಮಾಡಿದ ಎಡವಟ್ಟಿನಿಂದಾಗಿ ವಿಜಯ್ ರಾಘವೇಂದ್ರ ಅವರ ಕಾರು ಸೀಜ್ ಆಗಿದೆ.

ವಿಜಯ್ ರಾಘವೇಂದ್ರ ಕುಟುಂಬದ ಜೊತೆ ಶಿವಮೊಗ ಜಿಲ್ಲೆಯ ಹಲವು ಪ್ರವಾಸಿ ತಾಣಗಳಿಗೆ ಭೇಟಿಕೊಟ್ಟಿದ್ದಾರೆ. ಜೋಗ ನೋಡಿಕೊಂಡು ನಗರದ ಬಂಕ್ ನಲ್ಲಿ ಕಾರ್ ಗೆ ಪೆಟ್ರೋಲ್ ತುಂಬಿಸುವಂತೆ ಹೇಳಿದ್ದಾರೆ. ನೆಚ್ಚಿನ ನಟನನ್ನು ನೋಡಿದ ಖುಷಿಯಲ್ಲಿ ಬಂಕ್ ಸಿಬ್ಬಂದಿ ಪೆಟ್ರೋಲ್ ಬದಲಿಗೆ ಡೀಸೆಲ್ ತುಂಬಿಸಿದ್ದಾರೆ. ಇದರಿಂದಾಗಿ ಕಾರು ಸೀಜ್ ಆಗಿದೆ.

ತಪ್ಪಿನ ಅರಿವಾಗುತ್ತಲೇ ಎಚ್ಚೆತ್ತ ಪೆಟ್ರೋಲ್ ಬಂಕ್ ಸಿಬ್ಬಂದಿ ವಿಜಯ್ ರಾಘವೇಂದ್ರ ಅವರ ಬಳಿ ಕ್ಷಮೆ ಕೇಳಿದ್ದಾರೆ. ನಂತರ ವಿಜಯ್ ರಾಘವೇಂದ್ರ ಕಾರ್ ನ್ನು ಸರ್ವಿಸ್ ಗೆ ಕಳುಹಿಸಲಾಗಿದೆ. ಕೊನೆಗೆ ಬೇರೆ ಕಾರಿನಲ್ಲಿ ವಿಜಯ್ ರಾಘವೇಂದ್ರ ಮತ್ತು ಕುಟುಂಬದವರು ಬೇರೆ ಕಾರಿನಲ್ಲಿ ಪ್ರಯಾಣ ಬೆಳೆಸಿದ್ದಾರೆ.